Mysore
26
broken clouds

Social Media

ಭಾನುವಾರ, 16 ಆಗಸ್ಟ್ 2026
Light
Dark

ಇರಾನ್‌ ಮೇಲೆ ಇಸ್ರೇಲ್-ಅಮೇರಿಕಾ ಜಂಟಿ ದಾಳಿ: ಸಹಾಯವಾಣಿ ತೆರೆದ ಹಾಸನ ಜಿಲ್ಲಾಡಳಿತ

ಹಾಸನ: ಇರಾನ್‌ ಮೇಲೆ ಇಸ್ರೇಲ್‌-ಅಮೇರಿಕಾ ಜಂಟಿ ದಾಳಿ ನಡೆಸುತ್ತಿರುವ ಪರಿಣಾಮ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ.

ಕರ್ನಾಟಕ ಸರ್ಕಾರ ದುಬೈ ಸೇರಿದಂತೆ ವಿವಿಧ ದೇಶಗಳಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗೆ ಕ್ರಮಗಳನ್ನು ಕೈಗೊಂಡಿದೆ. ವಿವಿಧ ಜಿಲ್ಲಾಡಳಿತಗಳು ಸಹಾಯವಾಣಿಯನ್ನು ಆರಂಭಿಸಿದ್ದು, ಜನರು ಸಿಲುಕಿದ್ದರೆ ಅವರ ಕುಟುಂಬದವರು, ಸಂಬಂಧಿಕರು ಮಾಹಿತಿ ನೀಡಬೇಕು ಎಂದು ಮನವಿ ಮಾಡಿದೆ.

ಹಾಸನ ಜಿಲ್ಲಾಡಳಿತ ಸಹಾಯವಾಣಿ ಆರಂಭಿಸಿದ್ದು, ಇರಾನ್‌ ಹಾಗೂ ಇಸ್ರೇಲ್‌ ದೇಶಗಳಲ್ಲಿ ಯುದ್ಧ ಸಂಭವಿಸಿದ್ದು, ಅಪಾರ ಪ್ರಮಾಣದ ಸಾವು-ನೋವು ಸಂಭವಿಸುತ್ತಿದೆ ಎಂದು ಹೇಳಿದೆ.

ಹಾಸನ ಜಿಲ್ಲೆಯ ಸಾರ್ವಜನಿಕರು ಯಾರಾದರೂ ಈ ಯುದ್ಧ ಪೀಡಿತ ದೇಶಗಳಲ್ಲಿ ಸಿಲುಕಿದ್ದರೆ ಕೂಡಲೇ ಹಾಸನ ಜಿಲ್ಲಾ ವಿಪತ್ತು ನಿರ್ವಹಣಾ ಕೇಂದ್ರಕ್ಕೆ ಅಥವಾ ದೂರವಾಣಿ ಸಂಖ್ಯೆ 08172-261111, ಟೋಲ್‌ ಫ್ರೀಂ 08172-1077 ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿ ಮನವಿ ಮಾಡಿದ್ದಾರೆ.

 

Tags:
error: Content is protected !!