ನವದೆಹಲಿ: ಕೇಂದ್ರ ಚುನಾವಣಾ ಆಯೋಗ ನಾಲ್ಕು ರಾಜ್ಯ ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆ ದಿನಾಂಕ ಘೋಷಣೆ ಮಾಡಲು ತಯಾರಿ ನಡೆಸಿದೆ.
ಬಲ್ಲ ಮೂಲಗಳ ಪ್ರಕಾರ ಮಾರ್ಚ್.10ರ ಬಳಿಕ ಯಾವಾಗಲಾದರೂ ಚುನಾವಣಾ ವೇಳಾಪಟ್ಟಿ ಘೋಷಣೆಯಾಗಲಿದೆ.
ಕೇರಳ, ತಮಿಳುನಾಡು, ಅಸ್ಸಾಂ, ಪಶ್ಚಿಮ ಬಂಗಾಳ ಹಾಗೂ ಕೇಂದ್ರಾಡಳಿತ ಪುಚುಚೇರಿ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆಯಾಗಬೇಕಿದೆ.
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ನೇತೃತ್ವದ ತಂಡ ಈಗಾಗಲೇ ಮೂರು ರಾಜ್ಯಗಳಿಗೆ ಭೇಟಿ ನೀಡಿದೆ. ಮಾರ್ಚ್.6, 7ರಂದು ಕೇರಳ, ಮಾರ್ಚ್.9ರಂದು ಪಶ್ಚಿಮ ಬಂಗಾಳಕ್ಕೆ ತಂಡ ಭೇಟಿ ನೀಡಲಿದೆ.
ಈ ಚುನಾವಣೆ ಘೋಷಣೆ ನಡುವೆಯೇ ಕರ್ನಾಟಕದ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ಕ್ಷೇತ್ರಗಳ ಉಪಚುನಾವಣೆ ದಿನಾಂಕವನ್ನು ಚುನಾವಣಾ ಆಯೋಗ ಘೋಷಣೆ ಮಾಡುವ ನಿರೀಕ್ಷೆ ಇದೆ.





