Mysore
31
scattered clouds

Social Media

ಸೋಮವಾರ, 09 ಮಾರ್ಚ್ 2026
Light
Dark

ಬಾಗಲಕೋಟೆ ಕ್ಷೇತ್ರದ ಉಪಚುನಾವಣೆ: ಕಾಂಗ್ರೆಸ್‌ ಉಸ್ತುವಾರಿ ಸಮಿತಿ ಪಟ್ಟಿ ಪ್ರಕಟ

D K Shivakumar

ಬೆಂಗಳೂರು: ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಟೀಂ ರಚನೆ ಮಾಡಿದ್ದಾರೆ. ಉಪಚುನಾವಣೆಗೆ ಉಸ್ತುವಾರಿ ಸಮಿತಿ ರಚನೆ ಮಾಡಿ ಪಟ್ಟಿ ಪ್ರಕಟಿಸಿದ್ದಾರೆ.

ಬಾಗಲಕೋಟೆ ಉಪಚುನಾವಣೆ ಉಸ್ತುವಾರಿ ಪಟ್ಟಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ವಸಂತ್‌ ಕುಮಾರ್‌, ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವ ಆರ್.‌ಬಿ.ತಿಮ್ಮಾಪುರ, ಸಚಿವರಾದ ಸತೀಶ್‌ ಜಾರಕಿಹೊಳಿ, ಎಂ.ಬಿ.ಪಾಟೀಲ್‌, ಶಿವಾನಂದ ಪಾಟೀಲ್‌, ಶಿವರಾಜ್‌ ತಂಗಡಗಿ, ಶರಣಬಸಪ್ಪ ದರ್ಶನಾಪುರ, ಭೈರತಿ ಸುರೇಶ್‌, ರಹೀಂಖಾನ್‌ ಇದ್ದಾರೆ.

ಇನ್ನು ಶಾಸಕರಾದ ಸಿ.ಎಸ್.ನಾಡಗೌಡ, ವಿಜಯಾನಂದ ಕಾಶಪ್ಪನವರ್‌, ಎಂಎಲ್‌ಸಿಗಳಾದ ಜಗ್ಗಪ್ಪನವರ್‌, ಬಸವನಗೌಡ ಬಾದರ್ಲಿ, ಸೋಮಣ್ಣ ಬೇವಿನಮರದ, ಮಾಜಿ ಸಚಿವ ರಾಜಶೇಖರ್‌ ಪಾಟೀಲ್‌ ಮೊದಲಾದವರು ಇದ್ದಾರೆ.

Tags:
error: Content is protected !!