Mysore
22
overcast clouds

Social Media

ಭಾನುವಾರ, 02 ಆಗಸ್ಟ್ 2026
Light
Dark

ಮಂಡ್ಯ| 2 ವರ್ಷದ ಮಗುವಿನ ಕತ್ತು ಹಿಸುಕಿ ದಂಪತಿ ಆತ್ಮಹತ್ಯೆ

ಮಂಡ್ಯ: ಜಿಲ್ಲೆಯ ಕೆ.ಆರ್‌.ಪೇಟೆಯ ಜಯನಗರದಲ್ಲಿ ದಾರುಣ ಘಟನೆಯೊಂದು ನಡೆದಿದ್ದು, ದಂಪತಿಗಳು ತಮ್ಮ ಎರಡು ವರ್ಷದ ಮಗುವಿನ ಕತ್ತು ಸೀಳಿ ತಾವೂ ಆತ್ಮಹತ್ಯೆಗೆ ಶರಣಾಗಿದ್ದಾರೆ.

ದರ್ಶನ್‌ ಹಾಗೂ ದಿವ್ಯಶ್ರೀ ಎಂಬುವವರು ತಮ್ಮ ಎರಡು ವರ್ಷದ ಮಗುವಿನ ಕತ್ತು ಹಿಸುಕಿ ತಾವೂ ಕೂಡ ನೇಣಿಗೆ ಶರಣಾಗಿದ್ದಾರೆ.

ಕೆ.ಆರ್.‌ಪೇಟೆ ಟೌನ್‌ನ ಜಯನಗರದ ಸ್ವಗೃಹದಲ್ಲಿ ಈ ಘಟನೆ ಸಂಭವಿಸಿದೆ. ಮಾಹಿತಿ ಪ್ರಕಾರ ಪೋಷಕರು ಮಗುವನ್ನು ಕೊಲ್ಲಲು ಯತ್ನಿಸಿ ತಾವು ಆತ್ಮಹತ್ಯೆ ಮಾಡಿಕೊಂಡಿದ್ದರೂ, ಅದೃಷ್ಟವಶಾತ್‌ ಮಗು ಬದುಕುಳಿದಿದೆ.

ಇನ್ನು ಮೃತ ದರ್ಶನ್‌ ಹಾಗೂ ದಿವ್ಯಶ್ರೀ ಕಳೆದ ಮೂರು ವರ್ಷಗಳ ಹಿಂದೆಯಷ್ಟೇ ವಿವಾಹವಾಗಿದ್ದರು. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಕೆ.ಆರ್.ಪೇಟೆ ಟೌನ್‌ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ಸಂಬಂಧ ಪ್ರಕರಣ ದಾಖಲಾಗಿದ್ದು, ದಂಪತಿಗಳ ಈ ತೀವ್ರ ನಿರ್ಧಾರಕ್ಕೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ.

 

Tags:
error: Content is protected !!