ಬೆಂಗಳೂರು: ರಾಜ್ಯದ ಸರ್ಕಾರಿ ವೈದ್ಯರು ತಮ್ಮ ದೀರ್ಘಕಾಲದ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮಾರ್ಚ್.11ರಿಂದ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆಗೆ ಕರೆ ನೀಡಿದ್ದಾರೆ.
ಈ ಮುಷ್ಕರದಿಂದಾಗಿ ಜಿಲ್ಲಾ, ತಾಲ್ಲೂಕು ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಹೊರರೋಗಿಗಳ ವಿಭಾಗ ಸಂಪೂರ್ಣ ಸ್ಥಗಿತಗೊಳ್ಳುವ ಸಾಧ್ಯತೆಯಿದೆ.
ವೇತನ ಶ್ರೇಣಿ ಸುಧಾರಣೆ, ಖಾಲಿ ಇರುವ ಹುದ್ದೆಗಳ ಭರ್ತಿ ಹಾಗೂ ವೈದ್ಯರ ಸುರಕ್ಷತೆಗೆ ಕಟ್ಟುನಿಟ್ಟಿನ ಕಾನೂನು ಜಾರಿಗೆ ತರಬೇಕೆಂದು ಆಗ್ರಹಿಸಿ ಈ ನಿರ್ಧಾರ ಕೈಗೊಳ್ಳಲಾಗಿದೆ.
ವೈದ್ಯರ ಸಂಘವು ಈಗಾಗಲೇ ಸರ್ಕಾರಕ್ಕೆ ಹಲವು ಬಾರಿ ಮನವಿ ಸಲ್ಲಿಸಿದ್ದರೂ ಸೂಕ್ತ ಸ್ಪಂದನೆ ಸಿಗದ ಕಾರಣ, ಈ ಬಾರಿ ಕೆಲಸ ಸ್ಥಗಿತಗೊಳಿಸಿದ ಪ್ರತಿಭಟಿಸಲು ನಿರ್ಧರಿಸಿದ್ದಾರೆ. ಇದರಿಂದಾಗಿ ಜಿಲ್ಲಾ, ತಾಲ್ಲೂಕು ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಬರುವ ಬಡ ರೋಗಿಗಳಿಗೆ ತೀವ್ರ ತೊಂದರೆಯಾಗುವ ಭೀತಿ ಎದುರಾಗಿದೆ.





