Mysore
30
scattered clouds

Social Media

ಬುಧವಾರ, 18 ಮಾರ್ಚ್ 2026
Light
Dark

ನನ್ನ ಉಸಿರು ಇರುವವರೆಗೂ ರಾಜಕೀಯದಲ್ಲಿ ಇರುತ್ತೇನೆ: ಸಿಎಂ ಸಿದ್ದರಾಮಯ್ಯ

ಮೈಸೂರು: ನನ್ನ ಉಸಿರು ಇರುವವರೆಗೂ ನಾನು ರಾಜಕೀಯದಲ್ಲೇ ಸಕ್ರಿಯನಾಗಿರುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ವರುಣಾ ವಿಧಾನಸಭಾ ಕ್ಷೇತ್ರದ ವರಕೋಡು ಗ್ರಾಮದ ಬೀರೇಶ್ವರಸ್ವಾಮಿ ದೇವಸ್ಥಾನದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಕ್ಷೇತ್ರದ ಜನತೆ ಮತ್ತು ತಮ್ಮ ರಾಜಕೀಯ ಸಿದ್ಧಾಂತರ ಬಗ್ಗೆ ಮನಬಿಚ್ಚಿ ಮಾತನಾಡಿದರು.

ನಾನು ಸಾರ್ವಜನಿಕ ಸೇವೆ ಮಾಡುವುದನ್ನು ನಿಲ್ಲಿಸುವುದಿಲ್ಲ. ನನ್ನ ಜೀವನದ ಕೊನೆಯ ಕ್ಷಣದವರೆಗೂ ನಾನು ರಾಜಕೀಯದಲ್ಲೇ ಇರುತ್ತೇನೆ. ನಾನು ಈ ಕ್ಷೇತ್ರಕ್ಕೆ ಬರಲು ಸಾಧ್ಯವಾಗದಿದ್ದರೂ ನನ್ನ ಮಗ ಯತೀಂದ್ರ ಅವರು ಕ್ಷೇತ್ರಕ್ಕೆ ಬರುತ್ತಾರೆ. ನಿಮ್ಮ ಸಮಸ್ಯೆಗಳನ್ನು ಆಲಿಸಿ, ಅವುಗಳನ್ನು ಪರಿಹರಿಸುವ ಜವಾಬ್ದಾರಿಯನ್ನು ಅವರು ನಿಭಾಯಿಸುತ್ತಾರೆ ಎಂದು ಹೇಳಿದರು.

 

Tags:
error: Content is protected !!