Mysore
22
broken clouds

Social Media

ಮಂಗಳವಾರ, 25 ಆಗಸ್ಟ್ 2026
Light
Dark

ಮಂಡ್ಯ ಜಿಲ್ಲೆಯಲ್ಲಿ ಅಭಿವೃದ್ಧಿ ಪರ್ವ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

ಮಂಡ್ಯ: ಜಿಲ್ಲೆಯಲ್ಲಿ ಅಭಿವೃದ್ಧಿ ಪರ್ವ ಆರಂಭವಾಗಿದೆ. ನಾನು ಕೊಟ್ಟ ಮಾತಿನಂತೆ ನುಡಿದಂತೆ ನಡೆಯುತ್ತಿದ್ದೇನೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿಗೆ ತಿಳಿಸಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಅವರು, ಮಂಡ್ಯ ಜಿಲ್ಲೆಯ ಜನರ ಋಣ ತೀರಿಸುವ ಕೆಲಸ ಮಾಡುತ್ತೇನೆ ಎಂದು ಮಾತು ಕೊಟ್ಟಿದ್ದೆ. ಅದರಂತೆ ನುಡಿದಂತೆ ನಡೆಯುತ್ತಿದ್ದೇನೆ. ಜಿಲ್ಲೆಯಲ್ಲಿ ಅಭಿವೃದ್ಧಿ ಪರ್ವ ಆರಂಭವಾಗಿದೆ. ಜನತೆಯ ಆಶೀರ್ವಾದ, ಭಗವಂತನ ಕೃಪೆಯಿಂದ ಅವಕಾಶ ಸಿಕ್ಕಿದಾಗಲೆಲ್ಲಾ ಜಿಲ್ಲೆ ಮತ್ತು ರಾಜ್ಯದ ಜನತೆಯ ಸೇವೆಯನ್ನು ನಿಷ್ಠೆಯಿಂದ ಮಾಡಿದ್ದೇನೆ.

ಪ್ರಧಾನಿ ನರೇಂದ್ರ ಮೋದಿ ಅವರ ಮಾರ್ಗದರ್ಶನ ದೂರದೃಷ್ಟಿಯೊಂದಿಗೆ ಸಿಎಸ್‌ಆರ್‌ ನಿಧಿ ಮೂಲಕ ಮಂಡ್ಯ ಜಿಲ್ಲೆಯ ಜನರ ಉನ್ನತಿಗೆ ಜನರ ಉನ್ನತಿಗೆ ಅನೇಕ ಕಾರ್ಯಕ್ರಮಗಳನ್ನು ಅನುಷ್ಠಾನಕ್ಕೆ ತರಲಾಗಿದೆ. ಆರೋಗ್ಯ, ಶಿಕ್ಷಣ, ನೈರ್ಮಲ್ಯ, ಮೂಲಸೌಕರ್ಯ ಹಾಗೂ ವಿಕಲಚೇತನರ ಸಬಲೀಕರಣಕ್ಕೆ ಹೆಚ್ಚು ಒತ್ತು ನೀಡಿದ್ದೇನೆ ಎಂದು ತಿಳಿಸಿದರು.

 

Tags:
error: Content is protected !!