Mysore
24
overcast clouds

Social Media

ಗುರುವಾರ, 13 ಆಗಸ್ಟ್ 2026
Light
Dark

110 ಅಡಿಗೆ ಇಳಿದ ಕೆಆರ್‌ಎಸ್‌ ಜಲಾಶಯದ ನೀರಿನ ಮಟ್ಟ: ಕುಡಿಯುವ ನೀರಿಗಿಲ್ಲ ತೊಂದರೆ

ಮಂಡ್ಯ: ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನಲ್ಲಿರುವ ರೈತರ ಜೀವನಾಡಿ ಕೆಆರ್‌ಎಸ್‌ ಜಲಾಶಯದ ನೀರಿನ ಮಟ್ಟ 110.44 ಅಡಿಗೆ ಇಳಿದಿದೆ.

ಈ ಬಗ್ಗೆ ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ಮಾಹಿತಿ ನೀಡಿದ್ದು, ಕೆಆರ್‌ಎ ಜಲಾಶಯದ ನೀರಿನ ಗರಿಷ್ಠ ಸಾಮರ್ಥ್ಯ 124.80 ಅಡಿಗಳಿದ್ದು, ಸದ್ಯ 110.44 ಅಡಿ ನೀರಿನ ಮಟ್ಟ ಕುಸಿದಿದೆ. ಕಟ್ಟು ಪದ್ದತಿಯಲ್ಲಿ ರೈತರ ಬೆಳೆಗಳಿಗೆ ನಾಲೆಗಳ ಮೂಲಕ ನೀರು ಬಿಡಲಾಗುತ್ತದೆ.

ಜೂನ್‌ ಹಾಗೂ ಜುಲೈವರೆಗೂ ಕುಡಿಯುವ ನೀರಿನ ಸಮಸ್ಯೆಯಾಗುವುದಿಲ್ಲ. ಬೆಂಗಳೂರಿಗೆ ಈ ವರ್ಷ ಕುಡಿಯುವ ನೀರಿಗೂ ಸಮಸ್ಯೆ ಇಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

 

 

Tags:
error: Content is protected !!