Mysore
23
overcast clouds

Social Media

ಸೋಮವಾರ, 17 ಆಗಸ್ಟ್ 2026
Light
Dark

ಓದುಗರ ಪತ್ರ: ಪರೀಕ್ಷೆ ವೇಳೆ ವಿದ್ಯುತ್ ಕಡಿತ ಮಾಡದಿರಿ

ಓದುಗರ ಪತ್ರ

ಮಾರ್ಚ್ ತಿಂಗಳು ವಿದ್ಯಾರ್ಥಿಗಳ ಭವಿಷ್ಯ ನಿರ್ಧರಿಸುವ ಪರೀಕ್ಷಾ ಸಮಯ. ಇಂತಹ ಸಂದರ್ಭದಲ್ಲಿ ರಾಜ್ಯಾದ್ಯಂತ ಎಸ್ಕಾಂಗಳು ವಿದ್ಯುತ್ ಕಡಿತ ಮಾಡುತ್ತಿರುವುದು ಸರಿಯಲ್ಲ. ರಾಜ್ಯದಲ್ಲಿ ವಿದ್ಯುತ್ ಬೇಡಿಕೆ ಈಗಾಗಲೇ ೧೬,೦೦೦ ಮೆಗಾ ವ್ಯಾಟ್ ದಾಟಿದ್ದರೂ ಮುನ್ನೆಚ್ಚರಿಕೆ ವಹಿಸುವಲ್ಲಿ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ವಿಫಲವಾಗಿದೆ. ಬೆಂಗಳೂರಿನಲ್ಲೇ ದಿನಕ್ಕೆ ೫ ಗಂಟೆ ವಿದ್ಯುತ್ ಕಡಿತವಾಗುತ್ತಿದೆ. ಗ್ರಾಮೀಣ ಭಾಗದ ಶೇ.೭೦ ವಿದ್ಯಾರ್ಥಿಗಳು ರಾತ್ರಿ ಓದಿಗೆ ವಿದ್ಯುತ್ತನ್ನೇ ಅವಲಂಬಿಸಿದ್ದಾರೆ. ಸಂಜೆ ೬ ರಿಂದ ಬೆಳಿಗ್ಗೆ ೬ ರವರೆಗೆ ಕಡ್ಡಾಯವಾಗಿ ಲೋಡ್ ಶೆಡ್ಡಿಂಗ್ ನಿಲ್ಲಿಸಬೇಕು. ಪರೀಕ್ಷಾ ಸಮಯದಲ್ಲಿ ವಿದ್ಯಾರ್ಥಿಗಳ ಏಕಾಗ್ರತೆಗೆ ಭಂಗ ತರುವ ಈ ಕ್ರಮವನ್ನು ಕೈಬಿಟ್ಟು, ಸರ್ಕಾರವು ಪರ್ಯಾಯ ಮಾರ್ಗಗಳ ಮೂಲಕ ನಿರಂತರ ವಿದ್ಯುತ್ ಒದಗಿಸಲು ಆದ್ಯತೆ ನೀಡಬೇಕು.

-ಡಾ. ಎಚ್.ಕೆ.ವಿಜಯಕುಮಾರ್, ಬೆಂಗಳೂರು

 

Tags:
error: Content is protected !!