Mysore
32
scattered clouds

Social Media

ಭಾನುವಾರ, 22 ಮಾರ್ಚ್ 2026
Light
Dark

ನಾಡಿನೆಲ್ಲೆಡೆ ಯುಗಾದಿ ಹಬ್ಬದ ಸಂಭ್ರಮ

ಮೈಸೂರು: ಇಂದು ನಾಡಿನೆಲ್ಲೆಡೆ ಯುಗಾದಿ ಹಬ್ಬದ ಸಂಭ್ರಮ ಮನೆಮಾಡಿದೆ. ಬೆಲೆ ಏರಿಕೆ, ಮಧ್ಯಪ್ರಾಚ್ಯ ಯುದ್ಧ ಭೀತಿಯ ನಡುವೆಯೂ ಜನರು ಸಾಂಪ್ರದಾಯಿಕವಾಗಿ ಹಬ್ಬ ಆಚರಣೆ ಮಾಡುತ್ತಿದ್ದಾರೆ.

ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ಇಂದು ದೇವಸ್ಥಾನಗಳಿಗೆ ಭಕ್ತರ ಸಂಖ್ಯೆಯೇ ಹರಿದು ಬರುತ್ತಿದ್ದು, ಕಾಲಿಡಲು ಜಾಗವಿಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ.

ಇಂದು ಬೆಳಿಗ್ಗೆಯಿಂದಲೇ ಮೈಸೂರಿನ ವಿವಿಧ ದೇವಸ್ಥಾನಗಳಲ್ಲಿ ವಿವಿಧ ಪೂಜೆ ಪುನಸ್ಕಾರಗಳನ್ನು ನೆರವೇರಿಸಲಾಯಿತು.

ಭಕ್ತರು ಸರತಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆದು ಪುನೀತರಾದರು.

Tags:
error: Content is protected !!