Mysore
24
light rain

Social Media

ಶುಕ್ರವಾರ, 14 ಆಗಸ್ಟ್ 2026
Light
Dark

ಹಾಸನ: ಹಣಕಾಸು ವಿಚಾರಕ್ಕೆ ಯುವಕನ ಹತ್ಯೆ

ಹಾಸನ: ಹಣಕಾಸು ವಿಚಾರಕ್ಕೆ ಯುವಕನನ್ನು ಕರೆದೊಯ್ದು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಅರಸೀಕೆರೆ ತಾಲ್ಲೂಕಿನ ಚಿನ್ನೇನಹಳ್ಳಿ ಗ್ರಾಮದಲ್ಲಿ ನಡೆದಿದೆ.

ವರುಣ್‌ ಎಂಬಾತನೇ ಹತ್ಯೆಯಾಗಿರುವ ದುರ್ದೈವಿಯಾಗಿದ್ದಾನೆ. ಶ್ರೀ ಜೇನುಕಲ್ಲು ಸಿದ್ದೇಶ್ವರಸ್ವಾಮಿ ಬೆಟ್ಟದ ಹಿಂಭಾಗದಲ್ಲಿ ಯುವಕನನ್ನು ದುಷ್ಕರ್ಮಿಗಳು ಹತ್ಯೆಗೈದಿದ್ದಾರೆ.

ಮಾರ್ಚ್.‌15ರಂದು ಗಂಡಸಿ ಪೊಲೀಸ್‌ ಠಾಣೆಯಲ್ಲಿ ಕಾಣೆಯಾದ ಬಗ್ಗೆ ಪ್ರಕರಣ ದಾಖಲಾಗಿತ್ತು. ಈ ಬಗ್ಗೆ ವರುಣ್‌ ಸ್ನೇಹಿತ ನೀಡಿದ ಸುಳಿವಿನ ಮೇಲೆ ತನಿಖೆ ನಡೆಸಿದಾಗ ಹತ್ಯೆಯ ಸುಳಿವು ಸಿಕ್ಕಿದ್ದು, ಆರೋಪಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

Tags:
error: Content is protected !!