Mysore
23
overcast clouds

Social Media

ಮಂಗಳವಾರ, 12 ಮೇ 2026
Light
Dark

ಪ್ರಯಾಣಿಕರಿಗೆ ಗುಡ್‌ನ್ಯೂಸ್‌ ಕೊಟ್ಟ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ರಾಜ್ಯದಲ್ಲಿ ಸಾರಿಗೆ ಬಸ್‌ ಟಿಕೆಟ್‌ ದರವನ್ನು ಏರಿಕೆ ಮಾಡುವುದಿಲ್ಲ ಎಂದು ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ ನೀಡಿದ್ದಾರೆ.

ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಾರಿಗೆ ನಿಗಮಗಳಿಂದ ಬಲ್ಕ್‌ನಲ್ಲೇ ಡೀಸೆಲ್‌ ಖರೀದಿ ಮಾಡಲಾಗುತ್ತಿದೆ. ಆದರೆ ಬಸ್‌ ಟಿಕೆಟ್‌ ದರ ಹೆಚ್ಚಳ ಮಾಡುವುದಿಲ್ಲ. ಯುದ್ಧದ ಎಫೆಕ್ಟ್‌ನಿಂದಾಗಿ ಬಲ್ಕ್‌ನಲ್ಲಿ ಡೀಸೆಲ್‌ ದರ ಹೆಚ್ಚಾಗಿದೆ. ಆದರೂ ಅಲ್ಲೇ ಡೀಸೆಲ್‌ ಖರೀದಿ ಮಾಡಲಾಗುತ್ತಿದೆ. ಆದರೆ ಬಸ್‌ ಪ್ರಯಾಣ ದರ ಏರಿಕೆ ಮಾಡಲ್ಲ ಎಂದು ಸ್ಪಷ್ಟನೆ ನೀಡಿದರು.

Tags:
error: Content is protected !!