Mysore
25
scattered clouds

Social Media

ಸೋಮವಾರ, 06 ಏಪ್ರಿಲ 2026
Light
Dark

ಚಾ.ನಗರ | ಬೇಡರಪುರದಲ್ಲಿ ಮತ್ತೊಂದು ಚಿರತೆ ಸೆರೆ

ಚಾಮರಾಜನಗರ : ತಾಲ್ಲೂಕಿನ ಬೇಡರಪುರ ಗ್ರಾಮದಲ್ಲಿ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಇನ್ನೂ ಒಂದು ಚಿರತೆ ಸೆರೆಯಾಗಿದೆ.

ಗ್ರಾಮದ ಮಲ್ಲಣ್ಣ ಅವರ ಕಬ್ಬಿನ ಗದ್ದೆಯಲ್ಲಿ ಬಿಆರ್‌ಟಿ ಅರಣ್ಯ ಇಲಾಖೆ ಅಧಿಕಾರಿಗಳು ಇರಿಸಿದ್ದ ಬೋನಿಗೆ ಸುಮಾರು 5 ವರ್ಷದ ಗಂಡು ಚಿರತೆ ಗುರುವಾರ ಸೆರೆ ಸಿಕ್ಕಿತ್ತು. ಸೆರೆ ಸಿಕ್ಕ ಚಿರತೆಯನ್ನು ಅರಣ್ಯ ಸಿಬ್ಬಂದಿ ಕಾಡಿಗೆ ಬಿಟ್ಟಿದ್ದಾರೆ.
ಇತ್ತೀಚೆಗೆ ಗ್ರಾಮದ ನಿಂಗಪ್ಪ ಎಂಬವರ ಮೇಲೆ ಚಿರತೆ ದಾಳಿ ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದವು. ಹಾಗಾಗಿ ಚಿರತೆ ಸೆರೆಗೆ ಬೋನು ಇಡಲಾಗಿತ್ತು. ಇದೇ ಜಮೀನಿನ ಹತ್ತಿರ ಮಾ.5ರಂದು ಹೆಣ್ಣು ಚಿರತೆ ಸೆರೆ ಸಿಕ್ಕಿತ್ತು. ಇದೀಗ ಮತ್ತೊಂದು ಚಿರತೆ ಸೆರೆಯಾಗಿದೆ. ಈ ಹಿನ್ನೆಲೆ ಗ್ರಾಮದಲ್ಲಿ ಭಯದ ವಾತವರಣ ಸೃಷ್ಟಿಯಾಗಿದೆ.

Tags:
error: Content is protected !!