Mysore
23
clear sky

Social Media

ಮಂಗಳವಾರ, 24 ಮಾರ್ಚ್ 2026
Light
Dark

ಓದುಗರ ಪತ್ರ: ಗರಳಪುರಿ ಉತ್ಸವ ಸ್ವಾಗತಾರ್ಹ

ಓದುಗರ ಪತ್ರ

ದಕ್ಷಿಣ ಕಾಶಿ ಎಂದೇ ಪ್ರಸಿದ್ಧವಾಗಿರುವ ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯದಲ್ಲಿ ಶ್ರೀಕಂಠೇಶ್ವರ ರಥೋತ್ಸವ ವಿಜೃಂಭಣೆಯಿಂದ ನಡೆಯುತ್ತಿದೆ. ಆದರೆ ಇದೇ ಮೊದಲ ಬಾರಿಗೆ ಶಾಸಕರಾದ ದರ್ಶನ್ ಧ್ರುವ ನಾರಾಯಣರವರು ರಥೋತ್ಸವದ ಪ್ರಯುಕ್ತ ‘ಗರಳಪುರಿ ಉತ್ಸವ’ ಎಂಬ ಹೆಸರಿನಲ್ಲಿ ಒಂದು ವಾರ ಕಾಲ ನಾನಾ ರೀತಿ ಕಾರ್ಯಕ್ರಮಗಳನ್ನು ಆಯೋಜಿಸಿರುವುದು ನಂಜುಂಡೇಶ್ವರನ ಜಾತ್ರೆಗೆ ಮತ್ತಷ್ಟು ಮೆರಗನ್ನು ನೀಡಿದೆ. ಯೋಗ ಜಾಗೃತಿ, ವಚನ ಕಂಠಪಾಠ ಸ್ಪರ್ಧೆ,ಆರೋಗ್ಯಕರ ಜೀವನಕ್ಕೆ ಒಂದು ಹೆಜ್ಜೆ, ಚಿತ್ರಕಲಾ ಸ್ಪರ್ಧೆ, ಸಾಂಪ್ರದಾಯಿಕ ಸೀರೆ ಉಡುಗೆ ತೊಡುಗೆಗೆಗಳು, ಹೀಗೆ ನಾನಾ ರೀತಿಯ ಕಾರ್ಯಕ್ರಮಗಳು ನಡೆಯುತ್ತಿರುವುದು ಶ್ಲಾಘನೀಯ.

ಇದರಿಂದ ಕಲೆ, ಸಾಹಿತ್ಯ , ಸಂಸ್ಕೃತಿ ಎತ್ತಿ ಹಿಡಿದಂತಾಗುತ್ತದೆ, ಜೊತೆಗೆ ಪ್ರತಿಯೊಬ್ಬರಿಗೂ ಸಹ ತಮ್ಮ ಪ್ರತಿಭೆಯನ್ನು ಗುರುತಿಸಿಕೊಳ್ಳಲು ಸದಾವಕಾಶಗಳನ್ನು ಕಲ್ಪಿಸುವುದಲ್ಲದೆ, ಜಾಗೃತ ಮನೋಭಾವನೆ ಮೂಡಿಸುವ ನಿಟ್ಟಿನಲ್ಲಿ ಇಂತಹ ವಿಭಿನ್ನ ಕಾರ್ಯಕ್ರಮಗಳು ಜರುಗುತ್ತಿರುವುದು ಸ್ವಾಗತಾರ್ಹ.

– ಬಿ.ಎಸ್. ಸಾಯಿ ಸಂದೇಶ್, ಮೈಸೂರು

 

Tags:
error: Content is protected !!