Mysore
20
broken clouds

Social Media

ಶುಕ್ರವಾರ, 28 ಆಗಸ್ಟ್ 2026
Light
Dark

ಗುಂಡ್ಲುಪೇಟೆ| ಶಿವಪುರದ ತೋಟದ ಮನೆ ಬಳಿ ಚಿರತೆ ಪ್ರತ್ಯಕ್ಷ: ರೈತರಲ್ಲಿ ಆತಂಕ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು

ಗುಂಡ್ಲುಪೇಟೆ: ತಾಲ್ಲೂಕಿನ ಶಿವಪುರ ಸಮೀಪದ ಕಲ್ಲುಕಟ್ಟೆ ಬಳಿಯ ಜಮೀನಿನ ತೋಟದ ಮನೆಯ ಬಳಿ ಚಿರತೆಯೊಂದು ನಿರ್ಭಯವಾಗಿ ಓಡಾಡಿದ್ದು, ಮನೆಯಲ್ಲಿ ವಾಸ ಮಾಡುವ ಕುಟುಂಬದಲ್ಲಿ ಆತಂಕ ಎದುರಾಗಿದೆ.

ಶಿವಪುರ ಗ್ರಾಮದ ರೈತ ಸಿದ್ದಮಲ್ಲಪ್ಪ ಎಂಬುವವರ ಜಮೀನಿನಲ್ಲಿ ಚಿರತೆ ನಿರ್ಭೀತಿಯಿಂದ ಓಡಾಡುತ್ತಿರುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ರೈತ ಸಿದ್ಧಮಲ್ಲಪ್ಪ ಅವರು ಪತ್ನಿ ಮತ್ತು ಇಬ್ಬರು ಮಕ್ಕಳ ಜೊತೆ ತೋಟದ ಮನೆಯಲ್ಲಿ ವಾಸವಾಗಿದ್ದು, ಚಿರತೆ ಓಡಾಟದಿಂದ ತೀವ್ರ ಆತಂಕಗೊಂಡಿದ್ದಾರೆ. ಈ ಬಗ್ಗೆ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದು, ಕೂಡಲೇ ಚಿರತೆ ಸೆರೆ ಹಿಡಿಯುವಂತೆ ಒತ್ತಾಯಿಸಿದ್ದಾರೆ.

Tags:
error: Content is protected !!