Mysore
25
overcast clouds

Social Media

ಬುಧವಾರ, 12 ಆಗಸ್ಟ್ 2026
Light
Dark

ಭದ್ರಾ ಅಭಯಾರಣ್ಯ ಪರಿಸರ ಸೂಕ್ಷ್ಮ ಪ್ರದೇಶ ಗುರುತಿಸಲು ಕ್ರಮ : ಈಶ್ವರ ಖಂಡ್ರೆ

ಬೆಂಗಳೂರು : ಭದ್ರಾ ಅಭಯಾರಣ್ಯದ ಪರಿಸರ ಸೂಕ್ಷ್ಮ ವಲಯ ಪ್ರದೇಶವನ್ನು ನಿಗದಿ ಪಡಿಸುವ ಕುರಿತಂತೆ ಚಿಕ್ಕಮಗಳೂರು ಜಿಲ್ಲೆಯ ಜನಪ್ರತಿನಿಧಿಗಳೊಂದಿಗೆ ಸಭೆ ನಡೆಸಲಾಗಿದ್ದು, ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದರು.

ವಿಕಾಸಸೌಧದಲ್ಲಿಂದು ಚಿಕ್ಕಮಗಳೂರು ಜಿಲ್ಲೆ ಖಾಂಡ್ಯ ಹೋಬಳಿಯ ಗ್ರಾಮಸ್ಥರ ನಿಯೋಗವು ಕಾಡಾನೆ ಸೆರೆ, ಕಾಡುಕೋಣ ಮತ್ತು ಕಾಡುಹಂದಿಗಳ ಉಪಟಳ ನಿಯಂತ್ರಿಸುವಂತೆ ಕೋರಿ ಸಲ್ಲಿಸಿದ ಮನವಿ ಸ್ವೀಕರಿಸಿ ಮಾತನಾಡಿದ ಅವರು, 2011ರಲ್ಲಿ ಹಳ್ಳಿಗಳನ್ನೂ ಬಫರ್ ವಲಯದಲ್ಲಿ ಸೇರಿಸಲಾಗಿದೆ. ಅದೇ ರೀತಿ ಹಿಂದಿನ ಬಿಜೆಪಿ ಸರ್ಕಾರ ಡೀಮ್ಡ್ ಅರಣ್ಯ ವಿಚಾರದಲ್ಲೂ ವೈಜ್ಞಾನಿಕವಾಗಿ ಸಮೀಕ್ಷೆ ನಡೆಸದೆ, ಸಲ್ಲಿಸಿರುವ ಪ್ರಮಾಣ ಪತ್ರದಿಂದ ಗೊಂದಲವಾಗಿದ್ದು, ಈಗ ಆ ಸಮಸ್ಯೆಯನ್ನೂ ಪರಿಹರಿಸಲು ತಾವು ಪ್ರಾಮಾಣಿಕ ಪ್ರಯತ್ನ ಮಾಡುತ್ತಿರುವುದಾಗಿ ತಿಳಿಸಿದರು.

2022ರಲ್ಲಿ ಹಿಂದಿನ ಬಿಜೆಪಿ ಸರ್ಕಾರದಲ್ಲಿ ಅಧಿಕಾರಿಗಳು ಸ್ಥಳ ಪರಿಶೀಲನೆ ಮಾಡದೆ ಕುಳಿತಲ್ಲೇ ಮನೆ, ಪಟ್ಟಾ ಜಮೀನು, ಸರ್ಕಾರಿ ಕಚೇರಿ, ಶಾಲೆ, ಆಸ್ಪತ್ರೆ ಎಲ್ಲವನ್ನೂ ಡೀಮ್ಡ್ ಅರಣ್ಯದ ವ್ಯಾಪ್ತಿಗೆ ಸೇರಿಸಿದ್ದಾರೆ. ಈಗ ಎಲ್ಲೆಲ್ಲಿ ಇಂತಹ ಸಮಸ್ಯೆ ಇದೆಯೋ ಅದಕ್ಕೆ ಪರ್ಯಾಯವಾಗಿ ಬೇರೆ ಭೂಮಿ ಗುರುತಿಸಿ, ಡೀಮ್ಡ್ 2ರಲ್ಲಿ ಸಲ್ಲಿಸಿರುವ ಪ್ರಮಾಣಪತ್ರದಲ್ಲಿರುವ ಅರಣ್ಯ ಪ್ರದೇಶದ ಪ್ರಮಾಣ ಉಳಿಸಿಕೊಂಡು ಸುಪ್ರೀಂಕೋರ್ಟ್ ಗೆ ಪ್ರಮಾಣ ಪತ್ರ ಸಲ್ಲಿಸಲಾಗುವುದು ಎಂದರು.

ಶೃಂಗೇರಿ ಶಾಸಕ ರಾಜೇಗೌಡ, ಭದ್ರಾ ಅಚ್ಚುಕಟ್ಟು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ. ಅಂಶುಮಂತಗೌಡ, ಅರಣ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಮನೋಜ್ ಕುಮಾರ್ ಮತ್ತಿತರರು ಪಾಲ್ಗೊಂಡಿದ್ದರು.

 

Tags:
error: Content is protected !!