Mysore
25
light rain

Social Media

ಗುರುವಾರ, 21 ಮೇ 2026
Light
Dark

ನಂಜನಗೂಡಿನ ಗೌತಮ ಪಂಚಮಹಾರಥೋತ್ಸವದಲ್ಲಿ ದುರಂತ: ಓರ್ವ ಭಕ್ತ ಸಾವು

ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಇಂದು ನಡೆದ ಗೌತಮ ಪಂಚಮಹಾರಥೋತ್ಸವದಲ್ಲಿ ದುರಂತವೊಂದು ಸಂಭವಿಸಿದ್ದು, ಜಗಜಂಗುಳಿಯಲ್ಲಿ ಸಿಲುಕಿ ಓರ್ವ ಭಕ್ತ ಸಾವನ್ನಪ್ಪಿರುವ ಘಟನೆ ನಡೆದಿದೆ.

ಬೆಂಗಳೂರಿನ ಮಾಗಡಿ ನಿವಾಸಿ 56 ವರ್ಷದ ನಂಜುಂಡಸ್ವಾಮಿ ಎಂಬುವವರೇ ಮೃತಪಟ್ಟಿರುವ ದುರ್ದೈವಿಯಾಗಿದ್ದಾರೆ.

ಗೌತಮ ಪಂಚಮಹಾರಥೋತ್ಸವಕ್ಕೆ ಆಗಮಿಸಿದ್ದ ನಂಜುಂಡಸ್ವಾಮಿ ಅವರು, ಜನಜಂಗುಳಿಯಲ್ಲಿ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದರು. ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ಸಾವನ್ನಪ್ಪಿದ್ದಾರೆ.

 

Tags:
error: Content is protected !!