Mysore
22
overcast clouds

Social Media

ಸೋಮವಾರ, 17 ಆಗಸ್ಟ್ 2026
Light
Dark

ಕುವೈತ್‌ ಮೇಲೆ ಇರಾನ್‌ ಭೀಕರ ದಾಳಿ: ಭಾರತೀಯ ಕಾರ್ಮಿಕ ಸಾವು

ಟೆಹರಾನ್:‌ ಕುವೈತ್‌ ವಿದ್ಯುತ್‌ ಸ್ಥಾವರದ ಮೇಲೆ ಇರಾನ್‌ ಭೀಕರ ದಾಳಿ ನಡೆಸಿದ ಪರಿಣಾಮ ಭಾರತೀಯ ಕಾರ್ಮಿಕರೊಬ್ಬರು ಸಾವನ್ನಪ್ಪಿದ್ದಾರೆ.

ಇದು ದೇಶದ ಮೇಲೆ ಇರಾನ್‌ ನಡೆಸಿದ ಅತಿದೊಡ್ಡ ಆಕ್ರಮಣಗಳಲ್ಲಿ ಒಂದಾಗಿದೆ ಎಂದು ಸ್ವತಃ ಕುವೈತ್‌ ಇಂಧನ ಸಚಿವಾಲಯ ಹೇಳಿದೆ.

ಇಸ್ರೇಲ್‌ನತ್ತ ಉಡಾಯಿಸಲಾದ ಕ್ಷಿಪಣಿಗಳ ಮೂಲಕ ಭಾರತದ ಜನರಿಗೆ ಧನ್ಯವಾದಗಳು ಎಂದು ಇರಾನ್‌ ಹೇಳಿದ ಮರುದಿನವೇ ಈ ಘಟನೆ ನಡೆದಿದೆ.

ಇನ್ನು ಮಾಹಿತಿ ಪ್ರಕಾರ ಇರಾನ್‌ ದೇಶವು ಇಸ್ರೇಲ್‌ ಹಾಗೂ ಅಮೇರಿಕಾ ಮೇಲೆ ಪದೇ ಪದೇ ದಾಳಿ ನಡೆಸುತ್ತಿದೆ. ಇದರಿಂದ ರೋಷಗೊಂಡ ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರು ಇರಾನ್‌ ಮೇಲೆ ಭೀಕರ ದಾಳಿ ನಡೆಸಿ ಹಾರ್ಮುಜ್‌ ಜಲಸಂಧಿಯನ್ನು ವಶಪಡಿಸಿಕೊಳ್ಳಲೇಬೇಕು ಎಂದು ಪಣ ತೊಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

 

Tags:
error: Content is protected !!