Mysore
23
overcast clouds

Social Media

ಸೋಮವಾರ, 24 ಆಗಸ್ಟ್ 2026
Light
Dark

ಬೈಲಕುಪ್ಪೆ ಹಿಟ್‌ ಅಂಡ್‌ ರನ್‌ ಕೇಸ್‌ ; ರಸ್ತೆ ತಡೆದು ಪ್ರತಿಭಟನೆ ನಡೆಸಿದ ಸ್ಥಳೀಯರು

ಬೈಲಕುಪ್ಪೆ : ನಿನ್ನೆ ರಾತ್ರಿ ನಡೆದ ಹಿಟ್ ಅಂಡ್ ರನ್ ಅಪಘಾತದಲ್ಲಿ ಬೈಕ್ ಸವಾರ ಸಾವನ್ನಪ್ಪಿದ ಘಟನೆಗೆ ಆಕ್ರೋಶ ವ್ಯಕ್ತಪಡಿಸಿದ ಸ್ಥಳೀಯರು ಬೈಲಕುಪ್ಪೆ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದರು.

ಮೈಸೂರು-ಮಡಿಕೇರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು, ಆಟೋ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದರು. ಅಪಘಾತ ನಡೆಸಿದ ಕಾರು ಪರಾರಿಯಾಗಿದ್ದು, ಘಟನೆಯ ನಂತರ ಪೊಲೀಸರು ಇನ್ನೂ ಕಾರನ್ನು ಪತ್ತೆ ಹಚ್ಚದಿರುವುದಕ್ಕೆ ಸ್ಥಳೀಯರು ಆಕ್ರೋಶಗೊಂಡಿದ್ದರು.

ಸೋಮವಾರ ಸಂಜೆ ಬೈಲಕುಪ್ಪೆ ಪೊಲೀಸ್ ಠಾಣೆ ಎದುರು ಜಮಾಯಿಸಿದ ನೂರಾರು ಸ್ಥಳೀಯರು, “ಅಪಘಾತ ಮಾಡಿದ ಕಾರನ್ನು ತಕ್ಷಣ ಪತ್ತೆ ಹಚ್ಚಿ, ಆರೋಪಿಯನ್ನು ಬಂಧಿಸಿ” ಎಂದು ಘೋಷಣೆ ಕೂಗುತ್ತಾ ಪ್ರತಿಭಟನೆ ನಡೆಸಿದರು. ಪ್ರತಿಭಟನಾಕಾರರು ಮೈಸೂರು-ಮಡಿಕೇರಿ ಹೆದ್ದಾರಿಯನ್ನು ಸುಮಾರು ಅರ್ಧ ಗಂಟೆ ಕಾಲ ತಡೆಹಿಡಿದಿದ್ದರಿಂದ ಎರಡು ದಿಕ್ಕಿನಲ್ಲೂ ವಾಹನಗಳು ಸಾಲುಗಟ್ಟಿ ನಿಂತು ತೀವ್ರ ಸಂಚಾರ ದಟ್ಟಣೆ ಉಂಟಾಗಿತ್ತು.

ಪ್ರತಿಭಟನಾಕಾರರ ಜೊತೆ ಮಾತುಕತೆ ನಡೆಸಿದ ಪೊಲೀಸರು, ಸಿಸಿ ಕ್ಯಾಮೆರಾಗಳನ್ನು ತ್ವರಿತವಾಗಿ ಸರಿಪಡಿಸುವುದಾಗಿ ಮತ್ತು ಅಪಘಾತಕ್ಕೆ ಸಂಬಂಧಿಸಿದ ತನಿಖೆಯನ್ನು ತೀವ್ರಗೊಳಿಸುವ ಭರವಸೆ ನೀಡಿದರು. ಬಳಿಕ ಪ್ರತಿಭಟನಾಕಾರರು ಪ್ರತಿಭಟನೆ ಕೈಬಿಟ್ಟು ರಸ್ತೆ ತೆರವುಗೊಳಿಸಿದರು.

Tags:
error: Content is protected !!