Mysore
20
overcast clouds

Social Media

ಸೋಮವಾರ, 17 ಆಗಸ್ಟ್ 2026
Light
Dark

ಚಿರತೆ ದಾಳಿ: ಇಬ್ಬರಿಗೆ ಗಾಯ

ಹುಣಸೂರು: ಚಿರತೆ ಮರಿ ದಾಳಿಯಿಂದ ಇಬ್ಬರು ಗಾಯಗೊಂಡಿರುವ ಘಟನೆ ತಾಲ್ಲೂಕಿನ ಹುಲ್ಯಾಳು ಗ್ರಾಮದಲ್ಲಿ ನಡೆದಿದೆ.

ತಾಲ್ಲೂಕಿನ ಗಾವಡಗೆರೆಹೋಬಳಿಯ ಹುಲ್ಯಾಳು ಗ್ರಾಮದ ಅಜಯ್ ಹಾಗೂ ಕೋಳಿ ಫಾರಂ ಮಾಲೀಕ ಕೆ.ಆರ್.ನಗರದ ನಿವಾಸಿ ರಾಜು ಗಾಯಗೊಂಡವರು.

ಅಜಯ್ ಮೈಸೂರಿನ ಕೆ.ಆರ್. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೆ, ರಾಜು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಭಾನುವಾರ ಸಂಜೆ ಗ್ರಾಮದೊಳಗೆ ನುಗ್ಗಿದ್ದ ಚಿರತೆ ಮರಿಯು ಅಜಯ್‌ರಿಗೆ ಸೇರಿದ ಹುಲ್ಲಿನ ಮೆದೆಯೊಳಗೆ ಅಡಗಿ ಕುಳಿತಿತ್ತು. ಪಕ್ಕದಲ್ಲೇ ನಡೆದು ಹೋಗುತ್ತಿದ್ದ ಅಜಯ್ ಮೇಲೆರಗಿ ಕೈಗೆ ಕಚ್ಚಿದೆ.

ಈ ವೇಳೆ ಅಜಯ್ ಜೋರಾಗಿ ಕೂಗಿಕೊಂಡಿದ್ದರಿಂದ ಸಮೀಪದಲ್ಲಿದ್ದ ಜನರು ನೆರವಿಗೆ ಧಾವಿಸಿದ್ದಾರೆ. ಈ ಸಂದರ್ಭದಲ್ಲಿ ಕೋಳಿ ಫಾರಂ ಮಾಲೀಕ ರಾಜು ಅವರ ಮೇಲೆರಗಿದ ಚಿರತೆ ಅವರನ್ನು ಕಚ್ಚಿ ಗಾಯಗೊಳಿಸಿ ಚಿರತೆಯು ಮತ್ತೆ ಮೆದೆಯೊಳಗೆ ಸೇರಿಕೊಂಡಿತ್ತು. ಹುಲ್ಲಿನ ಮೆದೆ ಸುತ್ತುವರಿದ ಗ್ರಾಮಸ್ಥರು ಬಲೆ ಹಾಕಿ ಚಿರತೆಯನ್ನು ಸೆರೆ ಹಿಡಿದಿದ್ದಾರೆ. ಸಾರ್ವಜನಿಕರು ನೀಡಿದ ಮಾಹಿತಿ ಮೇರೆಗೆ ಸಾಮಾಜಿಕ ಅರಣ್ಯ ವಿಭಾಗದ ಡಿಆರ್‌ಎಫ್‌ಒ ರಮಣಗೌಡ ಹಾಗೂ ಸಿಬ್ಬಂದಿ ಭೇಟಿ ನೀಡಿ ಸುಮಾರು ಒಂದು ವರ್ಷದ ಚಿರತೆ ಮರಿಯನ್ನು ವಶಕ್ಕೆ ಪಡೆದು ಪಶುವೈದ್ಯರಿಂದ ಚಿಕಿತ್ಸೆ ಕೊಡಿಸಿ, ಬಂಧ ಮುಕ್ತಗೊಳಿಸಿದ್ದಾರೆ.

ಗಾಯಾಳುಗಳಿಗೆ ಕೆ.ಆರ್.ನಗರ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅರಣ್ಯ ಇಲಾಖೆ ವೆಚ್ಚ ಭರಿಸಲಿ : ಹುಲ್ಯಾಳು ಗ್ರಾಮದಲ್ಲಿ ಚಿರತೆ ದಾಳಿಯಿಂದ ಗಾಯಗೊಂಡಿ ರುವ ಗಾಯಾಳುಗಳಿಗೆ ಇಲಾಖೆ ವತಿಯಿಂದಲೇ ಉತ್ತಮ ಚಿಕಿತ್ಸೆ ಕೊಡಿಸುವ ಜೊತೆಗೆ ಸೂಕ್ತ ಪರಿಹಾರ ನೀಡಬೇಕೆಂದು ಸತ್ಯ ಫೌಂಡೇಶನ್ ಅಧ್ಯಕ್ಷ ಸತ್ಯಪ್ಪ ಒತ್ತಾಯಿಸಿದ್ದಾರೆ.

 

 

Tags:
error: Content is protected !!