Mysore
27
overcast clouds

Social Media

ಗುರುವಾರ, 13 ಆಗಸ್ಟ್ 2026
Light
Dark

ಹನೂರು: ಪಾಲಾರ್ ಚೆಕ್‌ಪೋಸ್ಟ್‌ನಲ್ಲಿ ಒಂಟಿಸಲಗ ದಾಂಧಲೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು

ಹನೂರು: ತಾಲ್ಲೂಕಿನ ಅಂತರರಾಜ್ಯ ಪಾಲಾರ್ ಚೆಕ್‌ಪೋಸ್ಟ್‌ನಲ್ಲಿ ಒಂಟಿ ಸಲಗದ ದಾಂಧಲೆಗೆ ಅರಣ್ಯ ಇಲಾಖೆ ಹಾಗೂ ಪೊಲೀಸ್ ಇಲಾಖೆ ಸಿಬ್ಬಂದಿ ವರ್ಗದವರು ಬೆಚ್ಚಿಬಿದ್ದಿದ್ದಾರೆ.

ನೆರೆಯ ತಮಿಳುನಾಡು ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ನಡೆಯುತ್ತಿರುವ ಹಿನ್ನೆಲೆ ಕರ್ನಾಟಕದ ಗಡಿ ಪಾಲಾರ್ ಚೆಕ್ ಪೋಸ್ಟ್ ನಲ್ಲಿ ಅಕ್ರಮ ಮದ್ಯ, ಹಣ ಸಾಗಣೆ ಸೇರಿದಂತೆ ಇನ್ನಿತರ ಅಕ್ರಮ ಚಟುವಟಿಕೆಗಳನ್ನು ತಡೆಯಲು ಬೆಳಗ್ಗೆ ಹಾಗೂ ರಾತ್ರಿ ಪಾಳಿಯಗಳಲ್ಲಿ ಹೆಚ್ಚಿನ ಸಿಬ್ಬಂದಿಗಳನ್ನು ನೇಮಕ ಮಾಡಲಾಗಿದೆ.

ಅದರಂತೆ ಬುಧವಾರ ರಾತ್ರಿ ಮಲೆ ಮಹದೇಶ್ವರ ಬೆಟ್ಟ ಪೊಲೀಸ್ ಠಾಣೆಯ ಮುಖ್ಯಪೇದೆ ರಾಮದಾಸ್, ಅರಣ್ಯ ಇಲಾಖೆಯ ಉಪವಲಯ ಅರಣ್ಯಾಧಿಕಾರಿ ರಮೇಶ್, ಗಾಡ್ ಮಹೇಶ್ ಕರ್ತವ್ಯದಲ್ಲಿದ್ದರು. ಈ ವೇಳೆ ರಾತ್ರಿ 10:30ರಲ್ಲಿ ಏಕಾಏಕಿ ಒಂಟಿ ಸಲಗವೊಂದು ವಸತಿಗೃಹದ ಸಮೀಪವೇ ಬಂದು ಘೀಳಿಟ್ಟಿದೆ. ಇದಲ್ಲದೆ ವಸತಿಗೃಹದ ಸಮೀಪವೇ ಬಂದು ನಿಂತಾಗ ಸಿಬ್ಬಂದಿ ವರ್ಗದವರು ಆನೆಯನ್ನು ಓಡಿಸಲು ಇನ್ನಿಲ್ಲದ ಪ್ರಯತ್ನ ಮಾಡಿದ್ದಾರೆ. ಆದರೆ ಆನೆ ಮಧ್ಯ ರಸ್ತೆಯಿಂದ ತೆರಳದೆ ನಿಂತಿದೆ.

ನಂತರ ಅರಣ್ಯ ಇಲಾಖೆ ಸಿಬ್ಬಂದಿ ವರ್ಗದವರು ಪಟಾಕಿ ಸಿಡಿಸಿದ್ದಾರೆ. ಪಟಾಕಿ ಶಬ್ದಕ್ಕೂ ಜಗ್ಗದೆ ಸ್ವಲ್ಪ ದೂರ ಸೇತುವೆಯ ಮೇಲೆ ಮುಂದೆ ತೆರಳಿ ನಂತರ ಮತ್ತೆ ವಾಪಸ್ ಅರಣ್ಯಕ್ಕೆ ತೆರಳಿದೆ.

 

Tags:
error: Content is protected !!