Mysore
20
broken clouds

Social Media

ಗುರುವಾರ, 27 ಆಗಸ್ಟ್ 2026
Light
Dark

ಎಲ್ಲಾ ರಾಜ್ಯದಲ್ಲೂ ದ್ವಿಭಾಷಾ ಶಿಕ್ಷಣದ ವ್ಯವಸ್ಥೆ ಜಾರಿಯಲ್ಲಿದೆ: ಸಚಿವ ಮಧುಬಂಗಾರಪ್ಪ

ಬೆಂಗಳೂರು: ಎಲ್ಲಾ ರಾಜ್ಯದಲ್ಲೂ ದ್ವಿಭಾಷಾ ಶಿಕ್ಷಣದ ವ್ಯವಸ್ಥೆ ಜಾರಿಯಲ್ಲಿದೆ ಎಂದು ಶಾಲಾ ಶಿಕ್ಷಣ ಸಾಕ್ಷರತಾ ಶಿಕ್ಷಣ ಸಚಿವ ಮಧುಬಂಗಾರಪ್ಪ ಅವರು, ತೃತೀಯ ಭಾಷಾ ವಿಷಯಕ್ಕೆ ಅಂಕಗಳಿಗೆ ಬದಲಾಗಿ ಗ್ರೇಡ್ ನೀಡುವ ನಿರ್ಧಾರವನ್ನು ಸಮರ್ಥಿಸಿಕೊಂಡರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರನ್ನು ಖುಷಿಪಡಿಸಲು ಬಿಜೆಪಿಯವರು ಹಿಂದಿ… ಹಿಂದಿ ಎಂದು ಪ್ರಮೋಟ್ ಮಾಡುತ್ತಿರುವುದು ಸರಿಯಲ್ಲ. ಎಲ್ಲಾ ಕಡೆಯು ಎರಡು ಭಾಷೆ ಮಾತ್ರ ಜಾರಿಯಲ್ಲಿದೆ ಎಂದರು.

ಗ್ರಾಮೀಣ ಭಾಗದಲ್ಲಿ ತೃತೀಯ ಭಾಷೆ ಹೇರಿಕೆಯಾಗಿದೆ. ಕೆಲವು ಕಡೆ ಕನ್ನಡ ಭಾಷೆಯನ್ನು ತೃತೀಯ ಭಾಷೆಯನ್ನಾಗಿ ಕಲಿಯುತ್ತಿದ್ದಾರೆ. ನಮ ಕನ್ನಡಿಗರು ಹೊಟ್ಟೆಪಾಡಿಗಾಗಿ ಹಿಂದಿ ಬೋಧನೆ ಮಾಡುತ್ತಿದ್ದಾರೆ. ಅಂಥವರಿಗೆ ಯಾವುದೇ ಒತ್ತಡ ಆಗಬಾರದು. ಅಲ್ಲದೆ ಯಾವುದೇ ಭಾಷೆ ವಿರುದ್ಧ ನಾವಿಲ್ಲ. ಈಗ ತೆಗೆದುಕೊಂಡಿರುವ ನಿರ್ಧಾರ ಒಳ್ಳೆಯದು ಎಂಬುದನ್ನು ಮುಖ್ಯಮಂತ್ರಿಯವರು ಹೇಳಿದ್ದಾರೆಂದು ತಿಳಿಸಿದರು.

ಬಿಜೆಪಿಯವರು ಟೀಕೆಟಿಪ್ಪಣಿ ಮಾಡುತ್ತಾರೆಂದು ಉತ್ತರ ಕೊಡಲು ಆಗುವುದಿಲ್ಲ. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ರಾಜ್ಯವನ್ನು ಆಳಿದವರು. ಅವರಿಗೆ ಗೌರವ ಕೊಡುತ್ತೇವೆ. ಆದರೆ ಕನ್ನಡಿಗರಿಗೆ ಮೋಸ ಮಾಡಿದವರೇ ಅವರು. ರಾಜ್ಯದ ತೆರಿಗೆ ಸಂಗ್ರಹ ಕುರಿತಂತೆ ಬಿಜೆಪಿಯವರು ದನಿ ಎತ್ತುವುದಿಲ್ಲ. ಅತಿಹೆಚ್ಚು ತೆರಿಗೆ ಪಾವತಿಸುವ ರಾಜ್ಯದಲ್ಲಿ ಕರ್ನಾಟಕ 2ನೇ ಸ್ಥಾನದಲ್ಲಿದೆ. ಬರಗಾಲ ಬಂದಾಗಲೂ ಬಿಜೆಪಿಯವರು ದನಿ ಎತ್ತುವುದಿಲ್ಲ ಎಂದು ಅವರು ವಾಗ್ದಾಳಿ ನಡೆಸಿದರು.

Tags:
error: Content is protected !!