Mysore
34
few clouds

Social Media

ಬುಧವಾರ, 29 ಏಪ್ರಿಲ 2026
Light
Dark

ಗುಂಡ್ಲುಪೇಟೆಯಲ್ಲಿ ಮುಳ್ಳುಹಂದಿ ದಾಳಿಗೆ ಚಿರತೆ ಸಾವು

ಗುಂಡ್ಲುಪೇಟೆ: ಬೇಟೆಯಾಡಲು ಹೋದ ಚಿರತೆಯೊಂದು ಮುಳ್ಳುಹಂದಿ ದಾಳಿಗೆ ಸಿಲುಕಿ ಬಲಿಯಾಗಿರುವ ಘಟನೆ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲ್ಲೂಕಿನ ಬೊಮ್ಮನಹಳ್ಳಿಯಲ್ಲಿ ನಡೆದಿದೆ.

ಆಹಾರಕ್ಕಾಗಿ ಮುಳ್ಳುಹಂದಿಯ ಮೇಲೆರಗಿದ ಚಿರತೆಯ ಎದೆಭಾಗಕ್ಕೆ ಹಂದಿಯ ತೀಕ್ಷ್ಣವಾದ ಮುಳ್ಳುಗಳು ಬಲವಾಗಿ ಚುಚ್ಚಿದ್ದರಿಂದ ತೀವ್ರ ರಕ್ತಸ್ರಾವ ಹಾಗೂ ಗಾಯಗೊಂಡ ಚಿರತೆ ಸ್ಥಳದಲ್ಲೇ ಮೃತಪಟ್ಟಿದೆ.

ಹಸಿದಿದ್ದ ಚಿರತೆಯು ಆಹಾರಕ್ಕಾಗಿ ಮುಳ್ಳುಹಂದಿ ಬೇಟೆಯಾಡಲು ಪ್ರಯತ್ನಿಸಿದೆ. ಮುಳ್ಳುಹಂದಿಯ ದೇಹದಲ್ಲಿದ್ದ ಮುಳ್ಳು ಚಿರತೆಯ ಎದೆಭಾಗಕ್ಕೆ ಚುಚ್ಚಿದೆ. ಗಂಭೀರವಾಗಿ ಗಾಯಗೊಂಡ ಚಿರತೆ ತೀವ್ರ ಅಸ್ವಸ್ಥಗೊಂಡು ಸ್ಥಳದಲ್ಲೇ ಮೃತಪಟ್ಟಿವೆ.

ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚಿರತೆಯ ಮರಣೋತ್ತರ ಪರೀಕ್ಷೆಯ ನಂತರವಷ್ಟೇ ಸಾವಿಗೆ ನಿಖರ ಕಾರಣ ತಿಳಿಯಲಿದೆ.

 

 

Tags:
error: Content is protected !!