Mysore
29
overcast clouds

Social Media

ಸೋಮವಾರ, 03 ಆಗಸ್ಟ್ 2026
Light
Dark

ವಿಧಾನಸೌಧಕ್ಕೆ ಮತ್ತೆ ಬರೋದು ಭಗವಂತನ ಇಚ್ಛೆ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

Kumaraswamy

ಬೆಂಗಳೂರು: ಮರಳಿ ವಿಧಾನಸೌಧ ಪ್ರವೇಶ ಮಾಡುವ ಬಗ್ಗೆ ಜನರ ಆಶೀರ್ವಾದ ಮತ್ತು ಭಗವಂತನ ಇಚ್ಛೆ ನಿರ್ಧರಿಸುತ್ತದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲವನ್ನು ದೇವರು ನಿಗದಿ ಮಾಡುತ್ತಾನೆ. ಅದರ ಪ್ರಕಾರ ಕೆಲಸ ಮಾಡಬೇಕಾಗುತ್ತದೆ ಎಂದರು.

ರಾಜ್ಯದಲ್ಲಿ ಬಿಜೆಪಿ, ಜೆಡಿಎಸ್ ಮೈತ್ರಿಯಾಗಿದ್ದು, ಜೊತೆಗೂಡಿ ಮತ್ತೆ ವಿಧಾನಸೌಧಕ್ಕೆ ಬರಲು ಪ್ರಯತ್ನಿಸುತ್ತೇವೆ ಎಂದು ಹೇಳಿದರು.

ಎರಡು ವರ್ಷಗಳ ನಂತರ ವಿಧಾನಸೌಧಕ್ಕೆ ಬಂದಿದ್ದೇನೆ ಎಂದಾಗ, ಮುಂದೆ ವಿಧಾನಸೌಧಕ್ಕೆ ಬರುತ್ತೀರಾ ಎಂಬ ಸುದ್ದಿಗಾರರ ಪ್ರಶ್ನೆಗೆ ಕುಮಾರಸ್ವಾಮಿ ಮೇಲಿನಂತೆ ಪ್ರತಿಕ್ರಿಯಿಸಿದರು.

Tags:
error: Content is protected !!