Mysore
25
light rain

Social Media

ಗುರುವಾರ, 10 ಸೆಪ್ಟೆಂಬರ್ 2026
Light
Dark

ಸಿಇಟಿ ಪರೀಕ್ಷೆ ವೇಳೆ ಜನಿವಾರ ತೆಗೆಸಿದ ಪ್ರಕರಣ: ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದ ಬ್ರಾಹ್ಮಣ ಮಹಾಸಭಾ

2028 karnataka assembly election

ಬೆಂಗಳೂರು: ಸಿಇಟಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳ ಜನಿವಾರ ತೆಗೆದ ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕರ್ನಾಟಕ ಬ್ರಾಹ್ಮಣ ಮಹಾಸಭಾ ಪತ್ರ ಬರೆದು ಆಕ್ರೋಶ ಹೊರಹಾಕಿದೆ.

ಬೆಂಗಳೂರಿನ ಕೃಪಾನಿಧಿ ಕಾಲೇಜಿನಲ್ಲಿ ಸಿಇಟಿ ಪರೀಕ್ಷಾರ್ಥಿಗಳ ಜನಿವಾರ ತೆಗೆಸಲಾಗಿತ್ತು. ನಿಯಮ ಇಲ್ಲದಿದ್ದರೂ ಜನಿವಾರ ತೆಗೆಸಿರುವುದಕ್ಕೆ ರಾಜ್ಯಾದ್ಯಂತ ಆಕ್ರೋಶ ವ್ಯಕ್ತವಾಗುತ್ತಿದೆ. ಈ ಬೆನ್ನಲ್ಲೇ ಬೆಂಗಳೂರಿನ ಮಡಿವಾಳ ಠಾಣೆಯ ಪೊಲೀಸರು ಮೂವರನ್ನು ವಶಕ್ಕೆ ಪಡೆದಿದ್ದಾರೆ.

ಈ ಸಂಬಂಧ ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದಿರುವ ಕರ್ನಾಟಕ ಬ್ರಾಹ್ಮಣ ಮಹಾಸಭಾ ಜನಿವಾರ ತೆಗೆಸಿದ ಪರೀಕ್ಷಾ ಕೇಂದ್ರದ ಕಾಲೇಜಿನ ಪರವಾನಗಿ ರದ್ದುಪಡಿಸಿ, ಜೊತೆಗೆ ಸಂಬಂಧಿಸಿದ ಸಂಸ್ಥೆಗೆ ಕನಿಷ್ಠ 25 ಲಕ್ಷ ರೂ ದಂಡ ವಿಧಿಸಿ ಎಂದು ಆಗ್ರಹಿಸಿದೆ.

Tags:
error: Content is protected !!