ಬೇಸಿಗೆ ತೀವ್ರಗೊಳ್ಳುತ್ತಿದ್ದಂತೆ ರಾಜ್ಯದ ಹಲವೆಡೆ ನೀರಿನ ಕೊರತೆ ಗಂಭೀರವಾಗುತ್ತಿದೆ. ಕೆರೆಗಳು, ಹಳ್ಳಗಳು ಒಣಗುತ್ತಿದ್ದು, ಅಂತರ್ಜಲ ಮಟ್ಟ ದಿನದಿಂದ ದಿನಕ್ಕೆ ಕುಸಿಯುತ್ತಿದೆ. ಇಂತಹ ಸಂದರ್ಭದಲ್ಲಿ ನೀರನ್ನು ಮಿತವಾಗಿ ಮತ್ತು ಜಾಗರೂಕತೆಯಿಂದ ಬಳಸುವುದು ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯಾಗಿದೆ. ನೀರು ಜನರ ಜೀವನಾಡಿಯಾಗಿದೆ. ನೀರಿಲ್ಲದೆ ಜೀವನ ಅಸಾಧ್ಯ. ಮನೆಗಳಲ್ಲಿ ನೀರು ಪೋಲಾಗುವುದನ್ನು ತಡೆಗಟ್ಟಬೇಕು. ಮಳೆನೀರನ್ನು ಸಂಗ್ರಹಿಸಿ ಬಳಸಬೇಕು. ಬಳಸಿದ ನೀರನ್ನು ಪುನರ್ಬಳಕೆ ಮಾಡುವುದು ಹಾಗೂ ಅಗತ್ಯವಿರುವಷ್ಟೇ ನೀರನ್ನು ಬಳಸುವಂತಹ ಸರಳ ಕ್ರಮಗಳನ್ನು ಅನುಸರಿಸಿದರೆ ನೀರಿನ ಸಮಸ್ಯೆಯನ್ನು ಸ್ವಲ್ಪ ತಗ್ಗಿಸಬಹುದು. ಬೇಸಿಗೆಯಲ್ಲಿ ನೀರನ್ನು ಜಾಗರೂಕತೆಯಿಂದ ಬಳಸಿ ಸಂರಕ್ಷಿಸುವುದು ಪ್ರತಿಯೊಬ್ಬರ ಕರ್ತವ್ಯ.
– ಎಂ.ಕಿರಣ್ ಕುಮಾರ್, ಮೈಸೂರು





