Mysore
22
overcast clouds

Social Media

ಸೋಮವಾರ, 10 ಆಗಸ್ಟ್ 2026
Light
Dark

ಹುಣಸೂರು | ಭಾರೀ ಗಾಳಿ-ಮಳೆಗೆ ಹಾರಿಹೋದ ಚಾವಣಿ

ಹುಣಸೂರು : ಬಿರುಗಾಳಿ ಮಳೆಗೆ ತಾಲ್ಲೂಕಿನ ಹನಗೋಡು ಹೋಬಳಿಯ ವದ್ಲಿ ಮನುಗನಹಳ್ಳಿಯಲ್ಲಿ ಮನೆಯ ಚಾವಣಿಗೆ ಹಾಕಿದ್ದ ಕಲ್ನಾರ್ ಶೀಟ್ ಹಾರಿಹೋಗಿದ್ದು, ಕುಟುಂಬ ಸಂಕಷ್ಟಕ್ಕೆ ಸಿಲುಕಿದೆ.

ಬುದ್ಧಿಮಾಂದ್ಯ ಪುಟ್ಟಸ್ವಾಮಿ ನಾಯಕ ಅವರು ಗ್ರಾಮದ ಹೊರವಲಯದ ತಮ್ಮ ಜಮೀನಿನಲ್ಲಿ ನಿರ್ಮಿಸಿಕೊಂಡಿದ್ದ ವಾಸದ ಮನೆ ಬಿರುಗಾಳಿಗೆ ಸಿಲುಕಿ ಹಾನಿಗೀಡಾಗಿದೆ. ಹೊಸದಾಗಿ ನಿರ್ಮಿಸಿದ್ದ ಮನೆಯ ಚಾವಣಿಗೆ ಹಾಕಿದ್ದ ಕಲ್ನಾರ್ ಶೀಟ್ ಸಂಪೂರ್ಣ ಹಾರಿ ಹೋಗಿದೆ. ಇದರಿಂದ ಮನೆಯೊಳಗಿದ್ದ ದವಸ-ಧಾನ್ಯ, ಬಟ್ಟೆ ಮತ್ತಿತರ ಪದಾರ್ಥಗಳಿಗೆ ಹಾನಿಯಾಗಿದೆ. ಪುಟ್ಟಸ್ವಾಮಿ ನಾಯಕರ ಕುಟುಂಬಕ್ಕೆ ಸರ್ಕಾರ ಸೂಕ್ತ ನೆರವು ಕಲ್ಪಿಸಬೇಕು ಎಂದು ಗ್ರಾಮಸ್ಥರು ಮನವಿ ಮಾಡಿದ್ದಾರೆ.

ಕಂದಾಯ ಇಲಾಖೆಯ ಗ್ರಾಮ ಆಡಳಿತಾಧಿಕಾರಿ ಚಂದನ್ ಭೇಟಿ ನೀಡಿ ಪರಿಶೀಲಿಸಿ, ಹಿರಿಯ ಅಧಿಕಾರಿಗಳಿಗೆ ಹಾನಿ ಕುರಿತು ವರದಿ ನೀಡಿದ್ದಾರೆ. ಗ್ರಾಮಕ್ಕೆ ಭೇಟಿ ನೀಡಿದ್ದ ಮಾಜಿ ಶಾಸಕ ಎಚ್.ಪಿ. ಮಂಜುನಾಥ್ ಅವರು ಸಾಂತ್ವನ ಹೇಳಿ, ವೈಯಕ್ತಿಕ ನೆರವು ನೀಡಿದರು.

 

Tags:
error: Content is protected !!