ಮಡಿಕೇರಿ : ಸ್ನಾನಕ್ಕೆ ತೆರಳಿದ್ದ ಯುವಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಇಲ್ಲಿಗೆ ಸಮೀಪದ ಬಲಮುರಿ ಗ್ರಾಮದಲ್ಲಿ ಭಾನುವಾರ ನಡೆದಿದೆ.
ಬಲಮುರಿ ಗ್ರಾಮದ ವಾಟೆಕಾಡು ಪೈಸಾರಿ ನಿವಾಸಿ ಕೂಲಿ ಕಾರ್ಮಿಕರಾದ ರಂಜು ಮತ್ತು ಪುಷ್ಪ ದಂಪತಿಯ ಪುತ್ರ ಪುನೀತ್ (21) ಮೃತಪಟ್ಟ ಯುವಕ. ಭಾನುವಾರ ಮಧ್ಯಾಹ್ನ ನಾಲ್ವರು ಹುಡುಗರ ತಂಡ ಬಲಮುರಿ ಕಾವೇರಿ ನದಿ ಸೇತುವೆಯ ಸಮೀಪ ಸ್ನಾನ ಮಾಡಲು ತೆರಳಿದ್ದರು. ಪುನೀತ್ ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಬಳಿಕ ಬಲಮುರಿ ನಿವಾಸಿ ಮುಳುಗು ತಜ್ಞ ಎಂ.ಆರ್.ಬಿಪಿನ್ ಮೃತದೇಹವನ್ನು ಪತ್ತೆಹಚ್ಚಿ ನೀರಿನಿಂದ ಮೇಲೆತ್ತಿದ್ದಾರೆ.
ನಾಪೋಕ್ಲು ಠಾಣೆ ಪೊಲೀಸರು ಘಟನಾ ಸ್ಥಳಕ್ಕೆ ತೆರಳಿ ಪರಿಶೀಲಿಸಿ, ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.





