ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು
ಹನೂರು: ತಮಿಳುನಾಡಿನ ಮುಖ್ಯಮಂತ್ರಿಯಾಗಿ ಟಿವಿಕೆ ಪಕ್ಷದ ಮುಖ್ಯಸ್ಥ ಹಾಗೂ ನಟ ಸಿ ಜೋಸೆಫ್ ವಿಜಯ್ ಅಧಿಕಾರ ಸ್ವೀಕರಿಸಿದ ಹಿನ್ನೆಲೆಯಲ್ಲಿ ಗಡಿಗ್ರಾಮ ಗೋಪಿನಾಥಂನಲ್ಲಿ ಅಭಿಮಾನಿಗಳು ಕೇಕ್ ಕತ್ತರಿಸಿ ಸಿಹಿ ಹಂಚಿ ಸಂಭ್ರಮಿಸಿದರು.
ನಟ ವಿಜಯ್ ಅಭಿಮಾನಿಗಳಾದ ಲಕ್ಷ್ಮಣ್ ಹಾಗೂ ಮತ್ತಿತರರು ಸಿಎಂ ಕುರ್ಚಿಯಲ್ಲಿ ಕುಳಿತ ವಿಜಯ್ ಫೋಟೋ ಹಿಡಿದು ಕೇಕ್ ಕತ್ತರಿಸಿ, ಪಟಾಕಿ ಸಿಡಿಸಿ ಸಂಭ್ರಮಿಸಿದರು.
ಮುಂದಿನ ದಿನಗಳಲ್ಲಿ ಪಕ್ಷದ ಪ್ರಣಾಳಿಕೆಯಲ್ಲಿ ನೀಡಿರುವ ಎಲ್ಲಾ ಭರವಸೆಗಳನ್ನು ಈಡೇರಿಸಿ, ಸಿನಿಮಾರಂಗದಲ್ಲಿ ಜನ ಮನ್ನಣೆ ಗಳಿಸಿದಂತೆ ರಾಜಕೀಯದಲ್ಲಿಯೂ ಜನ ನಾಯಕರಾಗಿ ದೇಶದಲ್ಲಿಯೇ ಮಾದರಿ ಸಿಎಂ ಆಗಲಿದ್ದಾರೆ ಎಂದು ಅಭಿಮಾನಿಗಳು ವಿಶ್ವಾಸ ವ್ಯಕ್ತಪಡಿಸಿದರು.





