Mysore
22
overcast clouds

Social Media

ಸೋಮವಾರ, 18 ಮೇ 2026
Light
Dark

ಶಾಸಕ ಜಿಟಿಡಿ ತಪ್ಪನ್ನು ತಿದ್ದಿಕೊಂಡು ಪಕ್ಷದಲ್ಲೇ ಉಳಿದರೆ ಅಭ್ಯಂತರವಿಲ್ಲ: ಮಾಜಿ ಸಚಿವ ಸಾ.ರಾ.ಮಹೇಶ್‌

S.R. Mahesh

ಮೈಸೂರು: ಶಾಸಕ ಜಿ.ಟಿ.ದೇವೇಗೌಡ ಅವರು ತಮ್ಮ ತಪ್ಪನ್ನು ತಿದ್ದಿಕೊಂಡು ಪಕ್ಷದಲ್ಲೇ ಉಳಿದರೇ ನಮ್ಮ ಅಭ್ಯಂತರವಿಲ್ಲ ಎಂದು ಮಾಜಿ ಶಾಸಕ ಸಾ.ರಾ.ಮಹೇಶ್‌ ತಿಳಿಸಿದ್ದಾರೆ.

ಈ ಕುರಿತು ಮೈಸೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವರಿಷ್ಠರ ಬಳಿ ಜಿ.ಟಿ.ದೇವೇಗೌಡರು ನಂಬಿಕೆ ಉಳಿಸಿಕೊಂಡರೆ ನಮ್ಮ ಅಭ್ಯಂತರವಿಲ್ಲ. ಜಿ.ಟಿ.ದೇವೇಗೌಡರಿಂದ ನಮ್ಮ ಪಕ್ಷಕ್ಕೆ ಬಹಳ ನಷ್ಟವಾಗಿದೆ. ಅವರು ಒಂದೊಂದು ಚುನಾವಣೆಗೆ ಒಂದೊಂದು ತೀರ್ಮಾನ ಮಾಡುತ್ತಾರೆ. ಇದೀಗ ಅವರ ತೀರ್ಮಾನದಿಂದ ಕಾರ್ಯಕರ್ತರಿಗೆ ಆಘಾತವಾಗಿದೆ ಎಂದು ಹೇಳಿದರು.

ಜೆಡಿಎಸ್‌ ಪಕ್ಷಕ್ಕಿಂತ ನಮಗೆ ಯಾರೂ ದೊಡ್ಡವರಲ್ಲ. ಜಿ.ಟಿ.ದೇವೇಗೌಡರಿಗೆ ಪಕ್ಷ ಎಲ್ಲವನ್ನೂ ಕೊಟ್ಟಿತ್ತು. ಆದರೆ ಮೋಸ ಮಾಡಿದರು. ಹಾಗಾಗಿ ಈ ಭಾಗದಲ್ಲಿ ಸಾಮೂಹಿಕ ನಾಯಕತ್ವ ಕಟ್ಟಿಕೊಂಡಿದ್ದೇವೆ. ನಾಳೆ ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸಮಾವೇಶವಿದೆ. ಆ ಕಾರಣ ದೇವೇಗೌಡರಿಗೆ ಹುಟ್ಟುಹಬ್ಬದ ಶುಭ ಕೋರಿದ್ದಾರೆ. ಈ ಎಲ್ಲಾ ತಂತ್ರಗಳು ನಮಗೆ ಅರ್ಥವಾಗುತ್ತದೆ ಎಂದು ಹೇಳಿದರು.

 

 

Tags:
error: Content is protected !!