ರಾಜ್ಯದಲ್ಲಿ ಅತ್ಯಂತ ಪ್ರಬಲ ನಾಯಕರಲ್ಲಿ ಸಿದ್ದರಾಮಯ್ಯನವರೂ ಕೂಡ ಒಬ್ಬರು. ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡುವುದರ ಮೂಲಕ ಅವರ ಆಡಳಿತ ತೆರೆಮರೆಗೆ ಸರಿದಿದೆ. ಜಾತ್ಯತೀತ ಜನತಾದಳದ ಪಕ್ಷದಿಂದ ಹೊರಬಂದು ಕಾಂಗ್ರೆಸ್ ಪಕ್ಷವನ್ನು ಸೇರಿ, ಕೆಲವು ವರ್ಷಗಳಲ್ಲೇ ಕಾಂಗ್ರೆಸ್ ಪಕ್ಷದ ನೇತೃತ್ವದಲ್ಲಿ ಅಧಿಕಾರ ಚುಕ್ಕಾಣಿ ಹಿಡಿದು ಪೂರ್ಣಾವಧಿ ಆಡಳಿತವನ್ನು ನಡೆಸಿದ ಹೆಗ್ಗಳಿಕೆ ಇವರಿಗೆ ಸಲ್ಲುತ್ತದೆ.
ತದನಂತರ ವಿರೋಧ ಪಕ್ಷದ ನಾಯಕನಾಗಿ ಕೆಲಸ ಮಾಡಿ ಮತ್ತೊಮ್ಮೆ ಇನ್ನೊಂದು ಬಾರಿಗೆ ಮುಖ್ಯಮಂತ್ರಿಯಾಗಿ ಆಡಳಿತ ನಡೆಸಿದ ಇವರು, ೧೭ ಬಾರಿ ಬಜೆಟ್ ಮಂಡಿಸಿದ ಕೀರ್ತಿಯನ್ನೂ ಪಡೆದಿದ್ದಾರೆ. ಗ್ಯಾರಂಟಿ ಯೋಜನೆಗಳ ಮೂಲಕ ಬಡವರ ಮನೆಗೆ ಪ್ರವೇಶಿಸಿದ ಇವರು ಅಹಿಂದ ನಾಯಕನಾಗಿ, ಸಾಮಾಜಿಕ ನ್ಯಾಯದ ಹರಿಕಾರನಾಗಿ, ಸೃಜನಶೀಲವಾಗಿ ಆಡಳಿತ ನಡೆಸಿದ್ದಾರೆ.
-ಪಿ.ಸಿ.ಕಂಗಾಣಿ ಸೋಮು, ಕ್ಯಾತಮಾರನಹಳ್ಳಿ , ಮೈಸೂರು



