ಬೆಂಗಳೂರು: ಸೋನಿಯಾ ಗಾಂಧಿ ಅವರು ನನ್ನ ಮೇಲೆ ಇಟ್ಟಿರುವ ನಂಬಿಕೆಯನ್ನು ಉಳಿಸಿಕೊಳ್ಳುತ್ತೇನೆ ಎಂದು ಡಿಕೆಶಿ ಹೇಳಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಸೋನಿಯಾ ಗಾಂಧಿ ಕರೆ ಮಾಡಿ ಮಾತನಾಡಿದ್ದರು. ಅವರು ಆರಂಭದಿಂದಲೂ ನನ್ನ ಮೇಲೆ ನಂಬಿಕೆ ಇಟ್ಟಿದ್ದಾರೆ. ನನ್ನನ್ನು ಕೆಪಿಸಿಸಿ ಅಧ್ಯಕ್ಷರನ್ನಾಗಿ ಮಾಡಿದ್ದು ಅವರೇ ಎಂದು ಹೇಳಿದರು.
ಎಲ್ಲರನ್ನೂ ಒಟ್ಟಾಗಿ ಕರೆದುಕೊಂಡು ಹೋಗುವಂತೆ ಅವರು ಸೂಚಿಸಿದ್ದಾರೆ. ಅದರಂತೆ ಎಲ್ಲರನ್ನೂ ಒಟ್ಟಿಗೆ ಕರೆದೊಯ್ಯುವುದಾಗಿ ಭರವಸೆ ನೀಡಿದ್ದೇನೆ ಎಂದು ಹೇಳಿದರು.





