Mysore
23
overcast clouds

Social Media

ಸೋಮವಾರ, 08 ಜೂನ್ 2026
Light
Dark

2013ರಲ್ಲಿ ನಾನು ಗೆದ್ದಿದ್ದರೆ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗುತ್ತಿರಲಿಲ್ಲ : ಡಾ.ಜಿ.ಪರಮೇಶ್ವರ್‌

g parameshwara pahalgam attack

ತುಮಕೂರು : 2013ರ ವಿಧಾನಸಭೆ ಚುನಾವಣೆಯಲ್ಲಿ ನಾನು ಸೋತೆ. ಬಹುಶಃ ನಾನು ಗೆದ್ದಿದ್ದರೆ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗುತ್ತಿರಲಿಲ್ಲ ಎಂದು ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌ ಹೇಳಿದ್ದಾರೆ.

ಉಪಮುಖ್ಯಮಂತ್ರಿಯಾದ ಹಿನ್ನೆಲೆಯಲ್ಲಿ ಇಂದು ಸಿದ್ಧಾರ್ಥ ಶಿಕ್ಷಣ ಸಂಸ್ಥೆಯ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಏರ್ಪಡಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ನನ್ನ ಹಣೆಬರಹವೋ ಏನೋ ಗೊತ್ತಿಲ್ಲ. ನಾನು ಆಗ ಸೋತ ಕಾರಣಕ್ಕೆ ಸಿದ್ದರಾಮಯ್ಯ ಮುಖ್ಯಮಂತ್ರಿ ಆದರು ಎಂದು ತಮ್ಮ ರಾಜಕೀಯ ಜೀವನ ನಡೆದು ಬಂದು ಹಾದಿ ನೆನದು ಭಾವುಕರಾದರು.

ರಾಜಕೀಯಕ್ಕೆ ಹೋಗಬೇಕೆಂಬ ಕಲ್ಪನೆಯೂ ಕೂಡ ಇರಲಿಲ್ಲ. ಕಾಲೇಜು ದಿನಗಳಲ್ಲಿ ಯೂತ್​ ಕಾಂಗ್ರೆಸ್​, ಎನ್​ಎಸ್​ಯುಐನಲ್ಲಿ ಓಡಾಡುತ್ತಿರಲಿಲ್ಲ. ವ್ಯಾಸಂಗ ಮಾಡುತ್ತಿದ್ದೆ. ರಾಜಕೀಯ ಪ್ರವೇಶ ಆಕಸ್ಮಿಕವಾಗಿ ಆಯಿತು. ರಾಜೀವ್‌ ಗಾಂಧಿ ಪ್ರಧಾನಿಯಾಗಿದ್ದಾಗ ನಮ್ಮ ಕ್ಯಾಂಪಸ್​ಗೆ ಭೇಟಿ ನೀಡಿದ್ದರು. ಅವರು ಕರೆ ಕೊಟ್ಟಿದ್ದರಿಂದ ಕಾಂಗ್ರೆಸ್​ ಪಕ್ಷ ಸೇರಿಕೊಂಡೆ ಎಂದರು.

ರಾಜಕೀಯಕ್ಕೆ ಬಂದು 40 ವರ್ಷ ಆಗುತ್ತಿದೆ. ಇಷ್ಟು ವರ್ಷಗಳಲ್ಲಿ ಸ್ವಲ್ಪ ಕೆಲಸ ಮಾಡಿದ್ದೇನೆ, ಇಲ್ಲದಿದ್ದರೆ ಯಾರೂ ಗುರುತಿಸುವುದಿಲ್ಲ. ಪಕ್ಷ ಎಲ್ಲಾ ಹುದ್ದೆಯನ್ನೂ ಕೊಟ್ಟಿದೆ. ಕೆಪಿಸಿಸಿ ಅಧ್ಯಕ್ಷ ಸ್ಥಾನದಿಂದ ಹಿಡಿದು ಪಕ್ಷದಲ್ಲಿ ವರ್ಕಿಂಗ್​ ಕಮಿಟಿಯಲ್ಲಿಯೂ ಸ್ಥಾನ ಕೊಟ್ಟಿದ್ದಾರೆ. ದೆಹಲಿಯಲ್ಲಿ ಎಐಸಿಸಿ ವರ್ಕಿಂಗ್​ ಕಮಿಟಿಯಲ್ಲಿಯೂ ಸದಸ್ಯನನ್ನಾಗಿ ಮಾಡಿದ್ದರು. ಅದಾದ ನಂತರ 2018ರಲ್ಲಿ ಉಪಮುಖ್ಯಮಂತ್ರಿ ಮಾಡಿದರು ಎಂದು ಹೇಳಿದರು.

2018ರಲ್ಲಿ ಪಕ್ಷ 80 ಸೀಟು ಗೆದ್ದಿತ್ತು. 30 ಸೀಟುಗಳನ್ನು ಗೆದ್ದಿದ್ದ ಜೆಡಿಎಸ್​ ಜೊತೆ ಸೇರಿ ಸಮ್ಮಿಶ್ರ ಸರ್ಕಾರ ಮಾಡಿದಾಗ ಕುಮಾರಸ್ವಾಮಿ ಮುಖ್ಯಮಂತ್ರಿಯಾದರು. ಅಂದೂ ಕೂಡ ನನ್ನನ್ನು ಮುಖ್ಯಮಂತ್ರಿ ಮಾಡಬಹುದಿತ್ತು, ಅದ್ರೆ ಎರಡನೇ ಸಲವೂ ಸಫಲ ಆಗಲ್ಲ. ಈ ಬಾರಿ ಅವಕಾಶ ಸಿಗಲಿದೆ ಎಂದು ತಿಳಿದಿದ್ದೆ. ಆದ್ರೆ ರಾಜಕೀಯ ಗೊತ್ತಲ್ಲ, ತೀರ್ಮಾನಗಳು ಹೇಗೇಗೋ ಆಗುತ್ತವೆ. ಹೀಗಾಗಿ ಉಪಮುಖ್ಯಮಂತ್ರಿ ಸ್ಥಾನ ಕೊಟ್ಟಿದ್ದಾರೆ. ರಾಜ್ಯದ ಜನ ನಮ್ಮನ್ನು ಗುರುತಿಸಿದ್ದಾರೆ ಎಂದು ಹೇಳಿದರು.

 

Tags:
error: Content is protected !!