ನೇರಳೆ ಹಣ್ಣಿನ ಬೀಜಗಳ ಔಷಧಿಯ ಗುಣಗಳನ್ನು ಪರಿಗಣಿಸಿ ಸರ್ಕಾರವು ಇವುಗಳ ಸಂರಕ್ಷಣೆ ಮತ್ತು ಮೌಲ್ಯವರ್ಧನೆಗೆ ಸೂಕ್ತ ಕ್ರಮ ಕೈಗೊಳ್ಳಬೇಕಾಗಿದೆ. ತೋಟಗಾರಿಕಾ ಇಲಾಖೆಯು ರೈತರು ಮತ್ತು ಸಣ್ಣ ವ್ಯಾಪಾರಿಗಳಿಂದ ನೇರಳೆ ಬೀಜಗಳನ್ನು ನ್ಯಾಯಯುತ ಬೆಲೆಗೆ ನೇರವಾಗಿ ಖರೀದಿಸಲು ಗ್ರಾಮೀಣ ಭಾಗಗಳಲ್ಲಿ ಅಧಿಕೃತ ಸಂಗ್ರಹಣಾ ಕೇಂದ್ರಗಳನ್ನು ಸ್ಥಾಪಿಸಬೇಕು. ಇವುಗಳಲ್ಲಿನ ಔಷಧಿಯ ಗುಣಗಳಿಂದಾಗಿ ಮಧುಮೇಹ ನಿಯಂತ್ರಣಕ್ಕೆ ದೇಶೀಯವಾಗಿ ಗುಣಮಟ್ಟದ ನೇರಳೆ ಬೀಜದ ಪುಡಿ ತಯಾರಿಸಲು ಸಣ್ಣ ಕೈಗಾರಿಕೆಗಳಿಗೆ ಸರ್ಕಾರವು ಆರ್ಥಿಕ ಸಹಾಯ, ಸಬ್ಸಿಡಿ ಮತ್ತು ತಾಂತ್ರಿಕ ತರಬೇತಿ ನೀಡಬೇಕು. ಆಯುಷ್ ಸಚಿವಾಲಯದ ಮೂಲಕ ಜಾಗತಿಕ ಮಾರುಕಟ್ಟೆಗೆ ಇದರ ರಫ್ತು ಮಾಡಲು ಉತ್ತೇಜಿಸಬೇಕು. ಅಲ್ಲದೆ ಕೇವಲ ೩ ರಿಂದ ೪ ವರ್ಷಗಳಲ್ಲಿ ಉತ್ತಮ ಇಳುವರಿ ನೀಡುವ ಸುಧಾರಿತ ಕಸಿ ಸಸಿಗಳನ್ನು ಉಚಿತವಾಗಿ ವಿತರಿಸುವ ಮೂಲಕ ಸರ್ಕಾರವು ರೈತರ ಆದಾಯವನ್ನು ದ್ವಿಗುಣಗೊಳಿಸಬಹುದಾಗಿದೆ.
-ಡಾ.ಎಚ್.ಕೆ.ವಿಜಯಕುಮಾರ್, ಬೆಂಗಳೂರು





