Mysore
26
overcast clouds

Social Media

ಬುಧವಾರ, 17 ಜೂನ್ 2026
Light
Dark

ರಾಮನಗರ ಶಾಸಕ ಇಕ್ಬಾಲ್‌ ಹುಸೇನ್‌ಗೆ ಹೃದಯಾಘಾತ: ಆಸ್ಪತ್ರೆಗೆ ದಾಖಲು

ಬೆಂಗಳೂರು: ರಾಮನಗರ ಶಾಸಕ ಇಕ್ಬಾಲ್‌ ಹುಸೇನ್‌ಗೆ ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಇಕ್ಬಾಲ್‌ ಹುಸೇನ್‌ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

ಇಕ್ಬಾಲ್‌ ಹುಸೇನ್‌ ಆರೋಗ್ಯದ ಬಗ್ಗೆ ಮಾಹಿತಿ ನೀಡಿರುವ ವೈದ್ಯ ಡಾ.ಶ್ರೀನಿವಾಸ್‌ ಅವರು, ಎಂಎಲ್‌ಎ ಅವರು ಕಳೆದ ಎರಡು ದಿನಗಳಿಂದಲೂ ಎದೆ ನೋಯುತ್ತಿದೆ ಎಂದು ಆಸ್ಪತ್ರೆಗೆ ಬಂದಿದ್ದರು. ಆಂಜಿಯೋಗ್ರಾಂ ಮಾಡಿದಾಗ ಬ್ಲಾಕ್ಸ್‌ ಇರೋದು ಪತ್ತೆ ಆಗಿದೆ. ಹಾರ್ಟ್‌ ಅಟ್ಯಾಕ್‌ ಅಲ್ಲ. ರಕ್ತನಾಳಗಳು ಬ್ಲಾಕ್‌ ಆಗಿದೆ ಎಂದು ಸ್ಪಷ್ಟನೆ ನೀಡಿದ್ದಾರೆ.

Tags:
error: Content is protected !!