ಚಾಮರಾಜನಗರ : ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಎಚ್.ಆರ್.ಸುರೇಶ್ ಅವರನ್ನು ಸೇವೆಯಿಂದ ಅಮಾನತ್ತು ಮಾಡಿ ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವಾಲಯದ ಕಾರ್ಯದರ್ಶಿ ಎಂ.ಎಸ್.ರಶ್ಮಿ ಆದೇಶ ಹೊರಡಿಸಿದ್ದಾರೆ.
ಸುರೇಶ್ ಅವರ ವಿರುದ್ಧ ವಿವಿಧ ಸಂಘಟನೆಗಳು ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳಿಂದ ದೂರುಗಳು ಸ್ವೀಕೃತವಾಗಿರುವ ಹಿನ್ನೆಲೆಯಲ್ಲಿ ಹಾಗೂ ತಮ್ಮ ವ್ಯಾಪ್ತಿಯ ಕಚೇರಿಯ ಮೇಲ್ವಿಚಾರಣೆ, ಅಧೀನ ಅಧಿಕಾರಿ/ಸಿಬ್ಬಂದಿಗಳ ಜೊತೆಗೆ ವಿಶ್ವಾಸದಿಂದ ಕರ್ತವ್ಯ ನಿರ್ವಹಿಸದಿರುವುದು, ಕಡತಗಳ ಚಲನಚಲನಕ್ಕೆ ಬಾಹ್ಯಮೂಲ ಸಿಬ್ಬಂದಿಗಳ ಬಳಕೆ, ನಿಯಮಾನುಸಾರ ಕರ್ತವ್ಯ ನಿರ್ಹಿಸದಿರುವುದು, ಸರ್ಕಾರದ ವರ್ಗಾವಣಾ ಆದೇಶ ಪಾಲಿಸದೇ ಇರುವುದು ಇತ್ಯಾದಿ ಕರ್ತವ್ಯ ಲೋಪ ಎಸಗಿರುವ ಆರೋಪದ ಮೇಲೆ ಅಮಾನತ್ತು ಮಾಡಿರುವುದಾಗಿ ಆದೇಶದಲ್ಲಿ ತಿಳಿಸಿದ್ದಾರೆ.




