Mysore
29
overcast clouds

Social Media

ಭಾನುವಾರ, 21 ಜೂನ್ 2026
Light
Dark

ಓದುಗರ ಪತ್ರ: ದೇವಿಯ ನೇರ ದರ್ಶನ ಭಾಗ್ಯ ಕಲ್ಪಿಸಿ

ಆಷಾಢ ಶುಕ್ರವಾರಗಳಂದು ( ಜುಲೈ ೧೭, ೨೪, ೩೧, ಆಗಸ್ಟ್ ೭ ರಂದು ಆಷಾಢ ಶುಕ್ರವಾರಗಳು) ಸಾವಿರಾರು ಭಕ್ತರು ಚಾಮುಂಡಿ ಬೆಟ್ಟಕ್ಕೆ ಮೆಟ್ಟಿಲುಗಳ ಮೂಲಕ ಹತ್ತಿ ನಂತರ ಸರದಿ ಸಾಲಿನಲ್ಲಿ ನಿಂತು ಚಾಮುಂಡೇಶ್ವರಿ ತಾಯಿಯ ದರ್ಶನ ಮಾಡುತ್ತಾರೆ.

೧,೧೦೧ ಮೆಟ್ಟಿಲುಗಳನ್ನು ಹತ್ತಿ ಸುಸ್ತಾಗಿರುತ್ತಾರೆ. ಆನಂತರ ಉದ್ದುದ್ದ ಸಾಲುಗಳಲ್ಲಿ ನಿಂತುಕೊಂಡು ಚಾಮುಂಡೇಶ್ವರಿ ತಾಯಿ ದರ್ಶನ ಮಾಡುತ್ತಾರೆ. ಎಷ್ಟೋ ಭಕ್ತಾದಿಗಳು ಕಷ್ಟಪಟ್ಟು ಮೆಟ್ಟಿಲುಗಳನ್ನು ಹತ್ತಿ ಭಕ್ತರ ಉದ್ದನೆಯ ಸಾಲುಗಳನ್ನು ನೋಡಿ ನನ್ನ ಕೈಲಿ ಇಷ್ಟೊಂದು ಕ್ಯೂ ಬಳಸಿಕೊಂಡು ಒಳಕ್ಕೆ ಹೋಗೊಕೆ ಆಗಲ್ಲ ಎಂದು ಹೊರಗಡೆನೇ ನಿಂತುಕೊಂಡು ಕೈಮುಗಿದು ಹೊರಟುಬಿಡು ವವರ ಸಂಖ್ಯೆಗೂ ಕಮ್ಮಿಯಿರುವುದಿಲ್ಲ. ಇಂತಹ ಭಕ್ತಾದಿಗಳಿಗೆ ನೇರ ದರ್ಶನ ವ್ಯವಸ್ಥೆ ಇದ್ದರೆ ದೇವಿಯ ದರ್ಶನ ಮಾಡಿ ಪುನೀತರಾಗುತ್ತಾರೆ.

ತಿರುಪತಿಯಲ್ಲಿರುವಂತೆ ಚಾಮುಂಡಿ ಬೆಟ್ಟದಲ್ಲಿಯೂ ಮೆಟ್ಟಿಲುಗಳ ಮೂಲಕ ಹತ್ತಿ ಬರುವ ಭಕ್ತಾದಿಗಳಿಗೆ ನೇರ ದರ್ಶನ ವ್ಯವಸ್ಥೆ ಮಾಡಿದರೆ ಅನುಕೂಲವಾಗುತ್ತದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಈ ಬಗ್ಗೆ ಸ್ಥಳೀಯ ಜನಪ್ರತಿನಿಽಗಳು, ಹಿರಿಯ ಅಧಿಕಾರಿಗಳ ಜೊತೆ ಚರ್ಚಿಸಿ ಈ ಬಾರಿಯ ಆಷಾಢ ಶುಕ್ರವಾರಗಳಲ್ಲಿ ಮೆಟ್ಟಿಲುಗಳನ್ನು ಹತ್ತಿ ಬರುವ ಭಕ್ತಾದಿಗಳಿಗೆ ಚಾಮುಂಡೇಶ್ವರಿ ತಾಯಿಯ ನೇರ ದರ್ಶನಕ್ಕೆ ಅವಕಾಶ ಕಲ್ಪಿಸಬೇಕಾಗಿದೆ.

-ಅಹಲ್ಯ ಸಿ.ನಾ. ಚಂದ್ರ, ಮೈಸೂರು

Tags:
error: Content is protected !!