Mysore
28
broken clouds

Social Media

ಬುಧವಾರ, 12 ಆಗಸ್ಟ್ 2026
Light
Dark

ಚಿರಕನಹಳ್ಳಿ ; ಬೋನಿಗೆ ಬಿದ್ದ ಹುಲಿ

ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ ಇಲಾಖೆ ಅಳವಡಿಸಿದ್ದ ಬೋನಿಗೆ ಸುಮಾರು ಹತ್ತು ವರ್ಷದ ಹುಲಿಯೊಂದು ಸೆರೆಯಾಗಿರುವ ಘಟನೆ ನಡೆದಿದೆ.

ಗ್ರಾಮದ ಸುತ್ತಮುತ್ತಲಿನ ಪ್ರದೇಶದಲ್ಲಿ ಹುಲಿ ಸಂಚಾರ ಕಂಡುಬಂದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಬೋನು ಅಳವಡಿಸಿತ್ತು. ಹುಲಿ ಬೋನಿಗೆ ಬಿದ್ದಿರುವ ವಿಷಯ ತಿಳಿದು ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ.

ಕಳೆದ ಹಲವು ದಿನಗಳಿಂದಲೂ ಹುಲಿ ದಾಳಿಯಿಂದಾಗಿ ಜಾನುವಾರುಗಳು ಬಲಿಯಾಗಿದ್ದು ಜನರಲ್ಲಿಯೂ ಆತಂಕ ಮೂಡಿಸಿತ್ತು ಜನರು ಜಮೀನುಗಳತ್ತ ಹೋಗಲು ಹಾಗೂ ಜಾನುವಾರುಗಳನ್ನು ಮೇಯಿಸಲು ತೆರಳಲು ಭಯಪಡುವಂತಹ ಸ್ಥಿತಿ ನಿರ್ಮಾಣವಾಗಿತ್ತು, ವಿಷಯ ತಿಳಿದು ಸ್ಥಳಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಹುಲಿಯ ಆರೋಗ್ಯ ತಪಾಸಣೆ ನಡೆಸಿದ ಬಳಿಕ ಮೇಲಾಧಿಕಾರಿಗಳ ಸೂಚನೆ ನಿಡಿದರೆ ಪುನರ್ವಸತಿ ಕೇಂದ್ರಕ್ಕೆ ಬಿಡುವುದ ಇಲ್ಲವೇ ಎಂಬ ಬಗ್ಗೆ ಚಿಂತಿಸಲಾಗುವುದು ಎಂದು ಕುಂದಕೆರೆ ಅರಣ್ಯ ವಲಯಾಧಿಕಾರಿ ನಾಗೇಂದ್ರ ನಾಯಕ್ ತಿಳಿಸಿದರು.

ಹುಲಿ ಸೆರೆಯಿಂದಾಗಿ ಗ್ರಾಮಸ್ಥರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದು, ಅರಣ್ಯ ಇಲಾಖೆ ಸಾರ್ವಜನಿಕರು ಸ್ಥಳದಲ್ಲಿ ಅನಗತ್ಯವಾಗಿ ಗುಂಪುಗೂಡದಂತೆ ಹಾಗೂ ಸುರಕ್ಷತಾ ಸೂಚನೆಗಳನ್ನು ಪಾಲಿಸುವಂತೆ ಅರಣ್ಯಾಧಿಕಾರಿಗಳು ಸ್ಥಳೀಯರಿಗೆ ಮನವಿ ಮಾಡಿದರು.

Tags:
error: Content is protected !!