ನವದೆಹಲಿ: ಸಂಸತ್ತಿನ ಮುಂಗಾರು ಅಧಿವೇಶನಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟದಲ್ಲಿ ಮಹತ್ವದ ಪುನಾರಚನೆ ನಡೆಯುವ ಸಾಧ್ಯತೆಗಳು ಹೆಚ್ಚಾಗಿವೆ ಎಂಬ ಮಾಹಿತಿ ಲಭ್ಯವಾಗಿದೆ.
ಮೂಲಗಳ ಪ್ರಕಾರ ಕೇಂದ್ರ ಸಚಿವ ಸಂಪುಟ ಪುನಾರಚನೆ ಹಾಗೂ ಬಿಜೆಪಿಯ ಹೊಸ ಸಂಘಟನಾ ತಂಡದ ಘೋಷಣೆ ಎರಡನ್ನೂ ಒಂದೇ ಅವಧಿಯಲ್ಲಿ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.
ಪ್ರಧಾನಿ ನರೇಂದ್ರ ಮೋದಿ ಅವರ ವಿದೇಶ ಪ್ರವಾಸದ ವೇಳಾಪಟ್ಟಿಯನ್ನು ಗಮನದಲ್ಲಿಟ್ಟುಕೊಂಡು ಸಚಿವ ಸಂಪುಟ ಪುನಾರಚನೆಯ ದಿನಾಂಕ ನಿಗದಿಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.




