ಕೊಳ್ಳೇಗಾಲ : ಮಹದೇಶ್ವರ ಬೆಟ್ಟಕ್ಕೆ ತೆರಳಿ ದರ್ಶನ ಪಡೆದು ವಾಪಸ್ ಬರುವಾಗ ಕೆ.ಎಸ್.ಆರ್.ಟಿ.ಸಿ ಬಸ್ ಪಲ್ಟಿಯಾಗಿ ಇಬ್ಬರು ಸಾವನ್ನಪ್ಪಿ, 10 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲ್ಲೂಕಿನ ಮಧುನಹಳ್ಳಿ ಬೈಪಾಸ್ ಬಳಿ ನಡೆದಿದೆ.
ದರ್ಶನ ಪಡೆದು ವಾಪಸ್ ಮೈಸೂರಿಗೆ ತೆರಳುತ್ತಿದ್ದ ವೇಳೆ ಕೆಎಸ್ ಆರ್ ಟಿಸಿ ಬಸ್ ಟೈರ್ ಸ್ಪೋಟಗೊಂಡು ಪಲ್ಟಿಯಾಗಿದೆ. ಗಾಯಾಳುಗಳ ಪೈಕಿ 10 ಪ್ರಯಾಣಿಕರ ಸ್ಥಿತಿ ಗಂಭೀರವಾಗಿದ್ದು ಗಾಯಾಗಳುಗಳನ್ನ ಕೊಳ್ಳೇಗಾಲ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.




