ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲ್ಲೂಕು ಕಚೇರಿ ಆಡಳಿತ ಸೌಧದಲ್ಲಿ ಇರುವ ನೆಮ್ಮದಿ ಕೇಂದ್ರದ ಮೂಲಕ ಜಾತಿ ಪ್ರಮಾಣ ಪತ್ರ, ಆದಾಯ ಪ್ರಮಾಣ ಪತ್ರ, ವಿಶೇಷಚೇತನರ ಪಿಂಚಣಿ ಸೇರಿದಂತೆ ಎಲ್ಲ ಪ್ರಮಾಣಪತ್ರಗಳಿಗೂ ಅರ್ಜಿ ಸಲ್ಲಿಸಲಾಗುತ್ತದೆ. ಶಾಲಾ ಕಾಲೇಜುಗಳ ದಾಖಲಾತಿ ಸಮಯವಾಗಿರುವುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಜಾತಿ ಪ್ರಮಾಣ ಪತ್ರ ಹಾಗೂ ಆದಾಯ ಪ್ರಮಾಣ ಪತ್ರಗಳನ್ನು ಪಡೆಯಲು ಇಲ್ಲಿಗೆ ಆಗಮಿಸುತ್ತಾರೆ. ಆದರೆ ನೆಮ್ಮದಿ ಕೇಂದ್ರದಲ್ಲಿ ಸಾಕಷ್ಟು ಸಿಬ್ಬಂದಿ ಹಾಗೂ ಕಂಪ್ಯೂಟರ್ಗಳು ಇಲ್ಲದೇ ಪ್ರಮಾಣ ಪತ್ರಗಳನ್ನು ಸಕಾಲಕ್ಕೆ ನೀಡುವುದು ವಿಳಂಬವಾಗುತ್ತಿದ್ದು, ಪ್ರತಿನಿತ್ಯ ಸಾರ್ವಜನಿಕರು ನೆಮ್ಮದಿ ಕೇಂದ್ರಗಳಿಗೆ ಅಲೆದಾಡುವಂತಾಗಿದೆ.
ಜನಪ್ರತಿನಿಧಿಗಳು ಹಾಗೂ ಸಂಬಂಧಪಟ್ಟ ಅಽಕಾರಿಗಳು ಕೂಡಲೇ ನೆಮ್ಮದಿ ಕೇಂದ್ರಗಳಿಗೆ ಹೆಚ್ಚುವರಿ ಸಿಬ್ಬಂದಿಗಳನ್ನು ನಿಯೋಜಿಸುವುದರೊಂದಿಗೆ ಅಗತ್ಯವಿರುವಷ್ಟು ಕಂಪ್ಯೂಟರ್ಗಳನ್ನು ಒದಗಿಸುವ ಮೂಲಕ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಬೇಕಾಗಿದೆ.
-ಸಿದ್ದಲಿಂಗೇಗೌಡ, ಹೈರಿಗೆ ಗ್ರಾಮ, ಹೆಚ್.ಡಿ.ಕೋಟೆ ತಾ.



