ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ(ಸೆಸ್ಕ್)ದವರು ಮೈಸೂರು ನಗರದ ವಿವಿಧೆಡೆ ಭೂಗತ ಕೇಬಲ್ಗಳನ್ನು ಅಳವಡಿಸುತ್ತಿದ್ದು, ಕಾಮಗಾರಿ ಪ್ರಗತಿಯಲ್ಲಿದೆ. ಸೆಸ್ಕ್ ಯುಜಿ ಕೇಬಲ್ ಅಳವಡಿಸುವ ಗುತ್ತಿಗೆ ಪಡೆದವರು ನಗರದ ನೂರೊಂದು ಗಣಪತಿ ದೇವಾಲಯದ ಪಕ್ಕದಲ್ಲಿರುವ ಅರಳಿ ಮರದ ಕೆಳಗೆ ಕೇಬಲ್ನ್ನು ಇಟ್ಟು ತಿಂಗಳುಗಳೇ ಕಳೆದರೂ ತೆರವುಗೊಳಿಸದೇ ಇರುವುದರಿಂದ ಇಲ್ಲಿ ಸಾರ್ವಜನಿಕರ ವಾಹನಗಳ ಸಂಚಾರಕ್ಕೆ ತೊಂದರೆಯಾಗಿದೆ. ಈ ವರೆಗೂ ಅರಳಿ ಮರದ ಕೆಳಗೆ ವಾಹನಗಳನ್ನು ನಿಲ್ಲಿಸುತ್ತಿದ್ದ ವಾಹನಗಳ ಸವಾರರು ವಿದ್ಯುತ್ ಕೇಬಲ್ಗಳನ್ನು ಇಟ್ಟಿರುವುದರಿಂದಾಗಿ ರಸ್ತೆಯ ಅಂಚಿನಲ್ಲಿ ವಾಹನಗಳನ್ನು ನಿಲುಗಡೆ ಮಾಡುತ್ತಿದ್ದು, ಈ ಮಾರ್ಗವಾಗಿ ಸಂಚರಿಸುವ ವಾಹನ ಸವಾರರಿಗೆ ತೊಂದರೆಯಾಗುತ್ತಿದೆ. ಸೆಸ್ಕ್ ಅಧಿಕಾರಿಗಳು ಅರಳಿ ಮರದ ಕೆಳಗೆ ಇಟ್ಟಿರುವ ಕೇಬಲ್ಗಳನ್ನು ಕೂಡಲೇ ತೆರವುಗೊಳಿಸಲು ಕ್ರಮ ಕೈಗೊಳ್ಳುವ ಮೂಲಕ ವಾಹನ ಸವಾರರಿಗೆ ಅನುಕೂಲ ಕಲ್ಪಿಸಬೇಕಾಗಿದೆ.
– ಸುಮನ್ಯು, ಮೈಸೂರು




