ನವದೆಹಲಿ: ಕೇಂದ್ರ ಸರ್ಕಾರ ಬಡ ರೋಗಿಗಳಿಗೆ ಸಿಹಿಸುದ್ದಿಯೊಂದನ್ನು ನೀಡಿದ್ದು, 39 ಅಗತ್ಯ ಔಷಧಿಗಳ ಬೆಲೆ ಇಳಿಕೆ ಮಾಡಿ ಆದೇಶ ಹೊರಡಿಸಿದೆ.
ರಾಷ್ಟ್ರೀಯ ಔಷಧ ದರ ನಿಯಂತ್ರಣ ಪ್ರಾಧಿಕಾರ ಮಹತ್ವದ ಆದೇಶ ಹೊರಡಿಸಿದ್ದು, ಬಿಪಿ, ಶುಗರ್, ಸೋಂಕುಗಳು, ಕಣ್ಣಿನ ಔಷಧಿ, ಅಸ್ವಸ್ಥತೆ ಹಾಗೂ ಉಸಿರಾಟದ ಖಾಯಿಲೆಯ ಔಷಧಿಯಂತಹ ದೀರ್ಘಕಾಲದ ಖಾಯಿಲೆಗಳಿಗೆ ಬಳಸುವ ಔಷಧಿಗಳ ದರವನ್ನು ಇಳಿಕೆ ಮಾಡಿದೆ.
ಇದರ ಜೊತೆಗೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದ್ದು, ನಿಗದಿ ಮಾಡಿರುವ ದರಕ್ಕಿಂತ ಹೆಚ್ಚಿನ ಬೆಲೆಗೆ ಔಷಧಿಗಳನ್ನು ಮಾರಾಟ ಮಾಡುವಂತಿಲ್ಲ ಎಂದು ಹೇಳಿದೆ.





