ದಕ್ಷಿಣ ಕಾಶಿ ಎಂದೇ ಪ್ರಸಿದ್ಧವಾಗಿರುವ ನಂಜನಗೂಡಿನಲ್ಲಿ ವಾಹನಗಳ ಸಂಚಾರದಟ್ಟಣೆ ವಿಪರೀತವಾಗಿದ್ದು, ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಆರ್.ಪಿ .ರಸ್ತೆಯಲ್ಲಿ ರೈಲು ಬರುವ ವೇಳೆ ಗೇಟ್ ಹಾಕಿದರೆ ಎಲ್ಲ ವಾಹನ ಸವಾರರೂ ಎಂ.ಜಿ.ಎಸ್. ರಸ್ತೆಯಲ್ಲಿ ಇರುವ ಅಂಡರ್ ಪಾಸ್ ಮೊರೆ ಹೋಗುತ್ತಾರೆ. ಆಗ ಪಟ್ಟಣದ ಹಳೆ ಸರ್ಕಾರಿ ಬಸ್ ನಿಲ್ದಾಣದ ಬಳಿ ಸಂಚಾರ ದಟ್ಟಣೆ ಉಂಟಾಗಿ ವಾಹನ ಸವಾರರು ಪರದಾಡುವಂತಾಗುತ್ತದೆ. ಟ್ರಾಫಿಕ್ ಜಾಮ್ ಉಂಟಾದ ಸಂದರ್ಭದಲ್ಲಿ ಸಂಚಾರ ದಟ್ಟಣೆಯನ್ನು ನಿಯಂತ್ರಿಸಲು ಪೊಲೀಸರು ಇರುವುದಿಲ್ಲ. ಆದ್ದರಿಂದ ರಸ್ತೆಯ ಎರಡೂ ಬದಿಗಳಿಂದ ಬರುವ ವಾಹನ ಸವಾರರು ಬೇಕಾಬಿಟ್ಟಿಯಾಗಿ ವಾಹನ ಚಲಾಯಿಸುವುದರಿಂದ ಸಂಚಾರ ದಟ್ಟಣೆ ಹೆಚ್ಚಾಗುತ್ತದೆ. ಮತ್ತೆ ಸಂಚಾರ ಸುಗಮವಾಗಲು ಗಂಟೆಗಳ ಕಾಲ ಕಾಯಬೇಕಾಗುತ್ತದೆ. ಈ ಹಿನ್ನೆಲೆಯಲ್ಲಿ ನಂಜನಗೂಡು ಟ್ರಾಫಿಕ್ ಪೊಲೀಸರು ಸಂಚಾರದಟ್ಟಣೆಯನ್ನು ನಿಯಂತ್ರಿಸುವ ಮೂಲಕ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಬೇಕು
-ಕೀರ್ತಿರಾಜ್, ವಕ್ಕಲಗೇರಿ, ನಂಜನಗೂಡು




