ಮಾಸ್ಕ್ ಧರಿಸಿ ಸಿಟಿ ಬಸ್ಸಿನಲ್ಲಿ ಸಂಚರಿಸಿ ರಿಯಾಲಿಟಿ ಚೆಕ್ ನಡೆಸಿದ ಸಾರಿಗೆ ಸಚಿವ ಭೈರತಿ ಸುರೇಶ್ ಅವರು ಕರ್ತವ್ಯಲೋಪ ಎಸಗಿದ ಸಿಟಿ ಬಸ್ ನಿರ್ವಾಹಕನನ್ನು ಅಮಾನತ್ತು ಮಾಡಿ ಶಿಸ್ತುಕ್ರಮ ಜರುಗಿಸಲು ಸೂಚನೆ ನೀಡಿದ್ದಾರೆ.
ಭೈರತಿ ಸುರೇಶ್ ಅವರು ನಗರಾಭಿವೃದ್ಧಿ ಸಚಿವರಾಗಿದ್ದಾಗ ಮೈಸೂರು ನಗರಾಭಿವೃದ್ಧಿ ಕಚೇರಿಗೆ ತೆರಳಿ ಇದೇ ರೀತಿ ರಿಯಾಲಿಟಿ ಚೆಕ್ ನಡೆಸಿದ್ದರೆ ಮುಡಾ ಹಗರಣವನ್ನು ತಡೆಯಬಹುದಿತ್ತಲ್ಲವೇ?
-ಪಿ.ಜೆ.ರಾಘವೇಂದ್ರ, ನ್ಯಾಯವಾದಿ, ಮೈಸೂರು


