ಬೆಂಗಳೂರು: ದೇವೇಗೌಡರ ಪತ್ನಿ ಚೆನ್ನಮ್ಮ ಆರಾಮಾಗಿದ್ದಾರೆ ಎಂದು ಮಣಿಪಾಲ್ ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ.
ಚೆನ್ನಮ್ಮ ಅವರಿಗೆ ಉಸಿರಾಟದ ತೊಂದರೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಚೆನ್ನಮ್ಮ ಆರೋಗ್ಯ ಕುರಿತು ಮಾಹಿತಿ ನೀಡಿರುವ ವೈದ್ಯರು, ಚೆನ್ನಮ್ಮ ಸದ್ಯ ಸುಧಾರಿಸಿಕೊಂಡಿದ್ದಾರೆ. ಎರಡು ದಿನದಲ್ಲಿ ಡಿಸ್ಚಾರ್ಜ್ ಮಾಡುವ ಪ್ಲಾನ್ ಇದೆ. ಸ್ವಲ್ಪ ಆಕ್ಸಿಜನ್ ಏರುಪೇರು ಇರುವುದರಿಂದ ಐಸಿಯುನಲ್ಲಿ ಅಡ್ಮಿಟ್ ಮಾಡಿದ್ದೇವೆ. ಅದರ ಹೊರತಾಗಿ ಯಾವುದೇ ಗಂಭೀರ ಪರಿಸ್ಥಿತಿ ಇಲ್ಲ ಎಂದು ಹೇಳಿದ್ದಾರೆ.




