ನವದೆಹಲಿ: ನೀಟ್ ಅಕ್ರಮಕ್ಕೆ ಸಂಬಂಧಿಸಿದಂತೆ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಒತ್ತಾಯಿಸಿ ಸಿಜೆಪಿ ನಡೆಸಿದ ಪ್ರತಿಭಟನೆ ವೇಳೆ ವಿದ್ಯಾರ್ಥಿಗಳ ಮೇಲೆ ಪೊಲೀಸರು ನಡೆಸಿದ ಲಾಠಿಚಾರ್ಜ್ ಕ್ರಮವನ್ನು ಪ್ರಶ್ನಿಸಿ ಸಲ್ಲಿಸಿದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂಕೋರ್ಟ್ ನಿರಾಕರಿಸಿದೆ.
ಪ್ರತಿಭಟನೆ ವೇಳೆ ವಿದ್ಯಾರ್ಥಿಗಳನ್ನು ಥಳಿಸಲಾಗಿದೆ ಎಂದು ವಕೀಲರು ಹೇಳಿದಾಗ ಮತ್ತು ವಿಡಿಯೀ ಪುರಾವೆಗಳನ್ನು ಪರಿಶೀಲಿಸುವಂತೆ ಉಲ್ಲೇಖಿಸಿದಾಗ ಸಿಜೆಐ ನಮ್ಮ ಸಮಯವನ್ನು ವ್ಯರ್ಥ ಮಾಡಬೇಡಿ. ನಾವು ಯಾವುದೇ ವೀಡಿಯೋಗಳನ್ನು ವೀಕ್ಷಣೆ ಮಾಡಲ್ಲ. ನಮ್ಮ ಬಳಿ ಸಮಯವೂ ಇಲ್ಲ ಎಂದು ಹೇಳಿದರು.




