Mysore
25
overcast clouds

Social Media

ಗುರುವಾರ, 23 ಜುಲೈ 2026
Light
Dark

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ ನಡೆಸಿರುವುದು ಖಂಡನೀಯ. ತಮ್ಮ ಭವಿಷ್ಯಕ್ಕಾಗಿ ಹಗಲು, ರಾತ್ರಿ ಕಷ್ಟಪಟ್ಟು ಓದಿ ಈ ನೀಟ್ ಪರೀಕ್ಷೆಯನ್ನು ಬರೆದಿದ್ದ ವಿದ್ಯಾರ್ಥಿಗಳು ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಮತ್ತೊಮ್ಮೆ ಪರೀಕ್ಷೆ ಬರೆಯುವಂತಾಗಿತ್ತು.

ಕೆಲವು ವಿದ್ಯಾರ್ಥಿಗಳು ಇದರಿಂದ ಮಾನಸಿಕ ಆಘಾತಕ್ಕೆ ಒಳಗಾಗಿ ಆತ್ಮಹತ್ಯೆ ಕೂಡ ಮಾಡಿಕೊಂಡಿದ್ದರು. ನೀಟ್ ಪರೀಕ್ಷೆ ಅವ್ಯವಸ್ಥೆಗೆ ಕಾರಣರಾದವರ ವಿರುದ್ಧ ಕ್ರಮ ಕೈಗೊಳ್ಳಲು ಆಗ್ರಹಿಸಿ ವಿದ್ಯಾರ್ಥಿಗಳು ನಡೆಸಿದ್ದ ಪ್ರತಿಭಟನೆಯನ್ನು ಹತ್ತಿಕ್ಕಲು ಪೊಲೀಸರು ಲಾಠಿ ಪ್ರಹಾರ ನಡೆಸಿರುವುದು ಸರಿಯಾದ ಕ್ರಮವಲ್ಲ.

 -ಪಿ.ಸಿ.ಕಂಗಾಣಿ ಸೋಮು, ಕ್ಯಾತಮಾರನಹಳ್ಳಿ, ಮೈಸೂರು

Tags:
error: Content is protected !!