ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ CWRC, CWMA ಆದೇಶ ವಿರೋಧಿಸಿ ರಾಜ್ಯದಲ್ಲಿ ರೈತರ ಹೋರಾಟ ಭುಗಿಲೆದ್ದಿದೆ.
ರೈತರ ಹೋರಾಟವನ್ನು ತೀವ್ರಗೊಳಿಸಲು ಕನ್ನಡ ಪರ ಸಂಘಟನೆಗಳು ಹಾಗೂ ರೈತಪರ ಸಂಘಟನೆಗಳು ಮುಂದಾಗಿದ್ದು, ತಮಿಳುನಾಡಿಗೆ ನೀರು ಹರಿಸದಂತೆ ಆಗ್ರಹಿಸಿದ ಆಗಸ್ಟ್.13ರಂದು ಅಖಂಡ ಕರ್ನಾಟಕ ಬಂದ್ಗೆ ಕರೆ ನೀಡಲಾಗಿದೆ.
ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರು, ಆಗಸ್ಟ್.13ರಂದು ಕರ್ನಾಟಕ ಬಂದ್ಗೆ ಕರೆ ಕೊಟ್ಟಿದ್ದೇವೆ. ಅಂದು ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಸಂಪೂರ್ಣ ಕರ್ನಾಟಕ ಬಂದ್ ಮಾಡಲಾಗುತ್ತದೆ ಎಂದು ಹೇಳಿದರು.




