Mysore
23
overcast clouds

Social Media

ಭಾನುವಾರ, 02 ಆಗಸ್ಟ್ 2026
Light
Dark

ಓದುಗರ ಪತ್ರ: ಪಾಲಿಕೆ ಆಯುಕ್ತರಾದ ಎಂ.ಕೆ. ಸವಿತಾ ನಡೆ ಶ್ಲಾಘನೀಯ

ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦ ತ್ಯಾಜ್ಯ ಮುಕ್ತ ತಾಣಗಳು ಕಾರ್ಯಕ್ರಮದ ಭಾಗವಾಗಿ ಫೈವ್ ಲೈಟ್ ಸರ್ಕಲ್ ಸಮೀಪದ ದಾವೂದ್ ಖಾನ್ ರಸ್ತೆಯಲ್ಲಿದ್ದ ಕಸ ಹಾಕುವ ತಾಣವನ್ನು ಸ್ವತಃ ಮಹಾನಗರಪಾಲಿಕೆ ಆಯುಕ್ತರಾದ ಎಂ. ಕೆ. ಸವಿತಾ ಅವರೇ ನೇತೃತ್ವ ವಹಿಸಿ,ಸ್ವಚ್ಛಗೊಳಿಸಿ ತ್ಯಾಜ್ಯ ಮುಕ್ತತಾಣವನ್ನಾಗಿ ಪರಿವರ್ತಿಸಿರುವುದು ಶ್ಲಾಘನೀಯ.

ಇದೇ ವೇಳೆ ಆಯುಕ್ತರು ತ್ಯಾಜ್ಯದ ರಾಶಿ ಇದ್ದ ತಾಣಕ್ಕೆ ತೆರಳಿ ಹಸಿ ಕಸ,ಒಣ ಕಸವನ್ನು ಬೇರ್ಪಡಿಸಿ,ಪ್ರತ್ಯೇಕ ಡಬ್ಬಿಗಳಲ್ಲಿ ತುಂಬಿಸಿದ ನಂತರ ಕಸದ ರಾಶಿಯಿಂದ ಕೂಡಿದ್ದ ರಸ್ತೆಯನ್ನು ಸ್ವಚ್ಛಗೊಳಿಸಿ, ಈ ತಾಣದಲ್ಲಿ ಮತ್ತೆ ತ್ಯಾಜ್ಯ ಸುರಿಯದಂತೆ ನಿರಂತರ ಮೇಲ್ವಿಚಾರಣೆ ಕೈಗೊಳ್ಳಲು ನಿರ್ಧರಿಸಿದ್ದೇವೆ ಎಂದು ಹೇಳಿರುವುದು ಮೆಚ್ಚುವಂತಹದ್ದು. ಮಹಾನಗರ ಪಾಲಿಕೆ ವ್ಯಾಪ್ತಿ ಪ್ರದೇಶದಲ್ಲಿ ಮುಂದಿನ ದಿನಗಳಲ್ಲಿಯೂ ಇದೇ ರೀತಿಯ ಸ್ವಚ್ಛತಾ ಕಾರ್ಯಕ್ರಮವನ್ನು ನಿರಂತರವಾಗಿ ಹಮ್ಮಿಕೊಂಡರೆ ಮೈಸೂರು ಮತ್ತೆ ದೇಶದ ನಂಬರ್ ಒನ್ ಸ್ವಚ್ಛನಗರ ಪ್ರಶಸ್ತಿ ಗಳಿಸುವುದರಲ್ಲಿ ಸಂಶಯವಿಲ್ಲ.

-ಬೆಸಗರಹಳ್ಳಿ ರವಿಪ್ರಸಾದ್, ಮೈಸೂರು

 

Tags:
error: Content is protected !!